ರಂಗಸ್ಥಳದಲ್ಲೇ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಹುಡಗೋಡು ಚಂದ್ರಹಾಸ

ಕೊಲ್ಲೂರು ಸಮೀಪದ ಯಳಚಿತ್‌ನಲ್ಲಿ ಭಾನುವಾರ ರಾತ್ರಿ ಕಲಾಧರ ಮೇಳದಿಂದ ಭೀಷ್ಮ ವಿಜಯ ಪ್ರಸಂಗ ನಡೆಯುತ್ತಿತ್ತು. ರಂಗದ ಮೇಲೆ ಸಾಲ್ವ ಪಾತ್ರದಲ್ಲಿ ಅಭಿನಯಿಸುತ್ತಿದ್ದ ಪ್ರಸಿದ್ಧ ಕಲಾವಿದ ಹುಡಗೋಡು ಚಂದ್ರಹಾಸ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ‘ಭೀಷ್ಮಾ’ ಎಂದು ಉದ್ಗಾರ ತೆಗೆಯುತ್ತಲೇ ವೇದಿಕೆಯಲ್ಲಿ ಬಿದ್ದ ಚಂದ್ರಹಾಸ ಮತ್ತೆ ಮೇಲೇಳಲೇ ಇಲ್ಲ.

ರಾಜಕೀಯ ರಂಗಕ್ಕೆ ಕಾಲಿರಿಸಿದ್ದ ಚಂದ್ರಹಾಸ ಅವರು ಉತ್ತರಕನ್ನಡದ ಹಡಿನಬಾಳ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ರಾಜಕೀಯಕ್ಕೆ ಸೇರಿದ ಬಳಿಕ ಸಕ್ರಿಯ ಯಕ್ಷಗಾನ ವೃತ್ತಿಯಿಂದ ದೂರವಾಗಿ ಹವ್ಯಾಸಿಯಾಗಿ ಕಲಾ ಸೇವೆ ಮುಂದುವರಿಸಿದ್ದರು.

ಜಾಹೀರಾತು

ರಾತ್ರಿ 11. 30 ಸುಮಾರಿಗೆ ದುರ್ಘಟನೆ ನಡೆದಿದ್ದು ತಕ್ಷಣ ಅವರನ್ನು ಬೈಂದೂರಿನ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಹೃದಯಾಘಾತಕ್ಕೊಳಗಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಇಹದ ಬದುಕು ಮುಗಿಸಿದರು.
ಚಂದ್ರಹಾಸ ಅವರು ಫೇಸ್ ಬುಕ್ ನಲ್ಲಿ ಸಕ್ರಿಯರಾಗಿದ್ದರು. ಅವರ ಅಭಿನಯದ ಕೊನೇ ಕ್ಷಣಗಳು ಫೇಸ್‌ಬುಕ್ ಖಾತೆಯಿಂದ ಲೈವ್ ಆಗಿ ಬರುತ್ತಿತ್ತು.

pic courtesy: Google

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ