ಸುಗಮ ಸಂಚಾರಕ್ಕಾಗಿ ರಸ್ತೆ ಸಂಚಾರ ಮಾರ್ಪಾಡು: ಎಎಸ್ಪಿ

ಬಂಟ್ವಾಳ: ಬಿ.ಸಿ ರೋಡ್ ಜಂಕ್ಷನ್‌ನಲ್ಲಿರುವ ಸರ್ವಿಸ್ ರಸ್ತೆಯಲ್ಲಿ ಸುಗಮ ಸಂಚಾರಕ್ಕಾಗಿ ಇತ್ತೀಚೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಎಎಸ್ಪಿ ಸೈದುಲು ಅದಾವತ್ ಹೇಳಿದ್ದಾರೆ.

www.bantwalnews.com Editor: Harish Mambady

ಜಾಹೀರಾತು

ಇದಕ್ಕೆ ಅವರು ನೀಡುವ ಕಾರಣಗಳು ಇವು.


ಸರ್ವಿಸ್ ರಸ್ತೆಯಲ್ಲಿ ಪ್ರಸ್ತುತ ಬಸ್‌ಗಳು ನಿಲ್ಲಿಸುತ್ತಿರುವ ಸ್ಥಳದಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಕೇವಲ ಅಂದಾಜು 100-150 ಮೀಟರ್ ದೂರ ಇರುತ್ತದೆ. ಇಲ್ಲಿ ಯಾವುದೇ ಅಧಿಕೃತ ತಂಗುದಾಣಗಳು ಇರುವುದಿಲ್ಲ. ಬಿ.ಸಿ. ರೋಡ್ ಜಂಕ್ಷನ್‌ನ ಫ್ಲೈ ಓವರ್ ಕೆಳಗಡೆ ತರಕಾರಿ ಮಾರಾಟಗಾರರು ವ್ಯಾಪಾರ ಮಾಡುತ್ತಿರುವುದರಿಂದ ಜನರು ರಸ್ತೆಯಲ್ಲಿಯೇ ನಿಂತು ವ್ಯಾಪಾರ ಮಾಡುತಿದ್ದು, ಇಲ್ಲಿಗೆ ಬಂಟ್ವಾಳ ಪೇಟೆ, ಕೈಕುಂಜೆ ಕಡೆಯಿಂದ ಜನರು ಬಂದು ಸೇರುವುದರಿಂದ ಹಾಗೂ ಖಾಸಗಿ ಬಸ್ ನಿಲ್ದಾಣಕ್ಕೆ ತೆರಳುವ ಬಸ್‌ಗಳು ಇದೇ ಸ್ಥಳದಲ್ಲಿ ಸಂಚರಿಸುವದರಿಂದ ವಾಹನ ದಟ್ಟಣೆ ಹಾಗೂ ಜನಜಂಗುಳಿ ಉಂಟಾಗುತ್ತಿದ್ದು, ಇದೇ ಸ್ಥಳದಲ್ಲಿ ಬಸ್‌ಗಳನ್ನು ನಿಲ್ಲಿಸಿದ ಜನರನ್ನು ಹತ್ತಿಸಿ ಇಳಿಸುವುದನ್ನು ಮಾಡುವುದರಿಂದ ಅಪಘಾತ ಘಟನೆಗಳು ನಡೆದು ಕಾನೂನು ಸುವ್ಯವಸ್ಥೆಗೂ ತೊಂದರೆಯಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಸರ್ವಿಸ್ ರಸ್ತೆಯ ಅಗಲವು ಕೇವಲ 17 ರಿಂದ 22 ಅಡಿ ಅಗಲವಿದ್ದು, ಇದರಿಂದ ಒಂದು ಬಸ್ ಬಂದು ನಿಲುಗಡೆ ಮಾಡಿದಲ್ಲಿ ಅದರ ಹಿಂದೆ ಹಲವಾರು ವಾಹನಗಳು ಬಂದು ನಿಲ್ಲುವುದರಿಂದ ನಿರಂತರವಾಗಿ ವಾಹನ ಸಂಚಾರಕ್ಕೆ ತಡೆ ಉಂಟಾಗಿ ತೊಂದರೆ ಅನುಭವಿಸುತ್ತಿರುವ ಬಗ್ಗೆ ಸಾರ್ವಜನಿಕರು ದೂರು ನೀಡಿರುತ್ತಾರೆ ಎಂದು ಅವರು ಹೇಳಿದ್ದಾರೆ.
ಸರ್ವಿಸ್ ರಸ್ತೆಯ ಪ್ರಸ್ತುತ ಬಸ್ ನಿಲುಗಡೆ ಮಾಡುತ್ತಿರುವ ಸ್ಥಳದಲ್ಲಿ ಪಿಎಸ್‌ಐ ಬಂಟ್ವಾಳ ಸಂಚಾರ ಠಾಣೆ ರವರು ಅಧ್ಯಯನ ನಡೆಸಿದ್ದು, ಬಂಟ್ವಾಳ ಎಎಸ್‌ಪಿ ರವರು ಖುದ್ದಾಗಿ ಈ ಸಮಸ್ಯೆಯನ್ನು ಮನಗಂಡು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಠಿ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಪರ್ಯಾಯ ವ್ಯವಸ್ಥೆಯನ್ನು ಮಾಡಿದ್ದು, ಸಾರ್ವಜನಿಕರು ಈ ವ್ಯವಸ್ಥೆಗೆ ಸಹಕಾರವನ್ನು ನೀಡಬೇಕಾಗಿ ವಿನಂತಿಸಿಕೊಂಡಿದ್ದಾರೆ.

ಜಾಹೀರಾತು

ಆಟೊ ಚಾಲಕರೊಂದಿಗೆ ಮಾತುಕತೆ:
ಪರ್ಯಾಯ ವ್ಯವಸ್ಥೆಗೆ ಕೆಲವು ಅಟೋ ಚಾಲಕರು ವಿರೋಧ ವ್ಯಕ್ತಪಡಿಸಿರುತ್ತಾರೆ. ಅಟೋ ಚಾಲಕರೊಂದಿಗೆ ಮಾತುಕತೆ ನಡೆಸಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪ್ರತ್ಯೇಕ ಅಟೋ ರಿಕ್ಷಾ ಪಾರ್ಕಿಂಗ್ ಮಾಡಲು ಕ್ರಮಕೈಗೊಳ್ಳುವುದಾಗಿ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಸ್ಥಳೀಯ ಪುರಸಭೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದು, ಅಟೋ ಚಾಲಕರಿಗೆ ಆಗುತ್ತಿರುವ ಅನಾನುಕೂಲತೆ ನಿವಾರಿಸಲು ಶೀಘ್ರವಾಗಿ ಪರಿಹಾರ ಕಂಡುಕೊಳ್ಳಲಾಗುವುದು ಎಂದವರು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸುಗಮ ಸಂಚಾರಕ್ಕಾಗಿ ರಸ್ತೆ ಸಂಚಾರ ಮಾರ್ಪಾಡು: ಎಎಸ್ಪಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*