Categories: ಕಲ್ಲಡ್ಕ

ಭಗವಂತನ ಸಂಪ್ರೀತಿಯೇ ಮನುಷ್ಯನ ನಿಜವಾದ ಆಸ್ತಿ : ಪಿ.ಬಿ.ಇಬ್ರಾಹಿಂ ಭಟ್ಕಳ

ಮನುಷ್ಯನ ಪ್ರತಿಯೊಂದು ಸತ್ಕಾರ್ಯಗಳು ಅಲ್ಲಾಹನ ಸಂಪ್ರೀತಿಗಾಗಿ ಇರಬೇಕು. ಆತನ ಸಂಪ್ರೀತಿಯೇ ಮನುಷ್ಯನ ನಿಜವಾದ ಆಸ್ತಿಯಾಗಿದ್ದು ಇದರಿಂದ ಇಹ ಪರ ವಿಜಯ ಸಾದ್ಯ ಎಂದು ಪಿಡಬ್ಲೂಡಿ ಗುತ್ತಿಗೆದಾರ ಹಾಜಿ ಪಿ.ಬಿ.ಇಬ್ರಾಹಿಂ ಭಟ್ಕಳ ಹೇಳಿದರು.

ಜಾಹೀರಾತು

ಕಲ್ಲಡ್ಕ – ಕೆ.ಸಿ ರೋಡ್ ನ ಮಸ್ಜಿದ್ ಅಲ್ ಜಾಮಿಅ ಆಯಿಷಾ ಇಬ್ರಾಹಿಂ ಇದರ ವತಿಯಿಂದ ಇಲ್ಲಿನ ಶೈಖುನಾ ಜಬ್ಬಾರ್ ಉಸ್ತಾದ್ ವೇದಿಕೆಯಲ್ಲಿ ನಡೆದ ಧಾರ್ಮಿಕ ಪ್ರವಚನ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಹುಟ್ಟೂರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.

ಕಲ್ಲಡ್ಕ ಮುಹಿಯ್ಯುದ್ದೀನ್ ಜುಮಾ ಮಸೀದಿ ಖತೀಬ್ ಇಸ್ಮಾಯಿಲ್ ಫೈಝಿ ಉದ್ಘಾಟಿಸಿದರು. ಕೆ.ಸಿ.ರೋಡ್ ಮಸೀದಿ ಅದ್ಯಕ್ಷ ಪಿ.ಬಿ.ಬಶೀರ್ ಅಧ್ಯಕ್ಷತೆ ವಹಿಸಿದ್ದರು. ಹಾಫಿಲ್ ನಿಜಾಮುದ್ದೀನ್ ಅಝರಿ ಕುಮ್ಮನಂ ಮುಖ್ಯ ಬಾಷನಗೈದರು.

ಕಲ್ಲಡ್ಕ ಎಂ.ಜೆ.ಎಂ.ಅದ್ಯಕ್ಷ ಹಾಜಿ ಜಿ ಅಬೂಬಕ್ಕರ್ ಗೋಳ್ತಮಜಲು, ಹಾಜಿ ಸುಲೈಮಾನ್ ನಾರ್ಶ, ಹಾಜಿ ಜಿ.ಮುಹಮ್ಮದ್ ಹನೀಫ್ ಗೋಳ್ತಮಜಲು, ಹಾಜಿ ಬಿ.ಕೆ.ಇದ್ದಿನಬ್ಬ ಕಲ್ಲಡ್ಕ,  ಜಿ.ಎಸ್.ಸುಲೈಮಾನ್ ಹಾಜಿ ಕಲ್ಲಡ್ಕ, ಹಾಜಿ ಜಿ.ಯೂಸುಫ್ ಗೋಳ್ತಮಜಲು, ನವಾಝ್ ಕೆ.ಎನ್, ಹಾಜಿ ಕೆ.ಎಂ.ಶಾಫಿ, ಹಾಜಿ ಅಬ್ದುಲ್ ಹಮೀದ್ ಗೋಲ್ಡನ್, ದ.ಕ.ಜಿಲ್ಲಾ ವಕ್ಫ್ ಮಂಡಳಿ ಸಲಹಾ ಸಮಿತಿ ಸದಸ್ಯ ನಝೀರ್ ಮಠ, ಹಾಜಿ ಬಿ.ಎ.ಖಾದರ್ ಕೆ.ಸಿ.ರೋಡ್, ಪಿ. ಬಿ. ಶಾಹಿನ್ ಭಟ್ಕಳ, ಪಿ.ಬಿ.ಅಬ್ದುಲ್ ಅಝೀಝ್ ಬೋಳಂಗಡಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಬಾಗವಹಿಸಿದ್ದರು.

ಜಾಹೀರಾತು

ಕೆ.ಸಿ.ರೋಡ್ ಮಸೀದಿ ಖತೀಬ್ ಹೈದರ್ ದಾರಿಮಿ ಸ್ವಾಗತಿಸಿ, ಅಬ್ದುಲ್ಲಾ ಮುಸ್ಲಿಯಾರ್ ವಂದಿಸಿದರು. ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ