Categories: ಬಂಟ್ವಾಳ

ಸಂಭ್ರಮದ ಸ್ವಾಗತದೊಂದಿಗೆ ಪರೀಕ್ಷೆ ಬರೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಸ್ವಾಗತ ಕೋರುವ ಬ್ಯಾನರ್, ಕಮಾನುಗಳು, ಸೆಖೆಯಲ್ಲಿ ಬೆವರೊರೆಸಿಕೊಳ್ಳುವ ವಿದ್ಯಾರ್ಥಿಗಳಿಗೆ ಪಾನೀಯ, ಉಪಾಹಾರ ವ್ಯವಸ್ಥೆ, ಧರ್ಮಗುರುಗಳಿಂದ ಆಶೀರ್ವಾದ.. ಹೀಗೆ ಬಂಟ್ವಾಳ ತಾಲೂಕಿನಲ್ಲಿ ಗುರುವಾರ ಪ್ರಥಮ ಭಾಷೆ (ಕನ್ನಡ) ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಷ್ಟೇ ಅಲ್ಲ, ಶಿಕ್ಷಣಾಭಿಮಾನಿಗಳಿಂದಲೂ ಸಂಭ್ರಮದ ಪ್ರೋತ್ಸಾಹ.

ಬಂಟ್ವಾಳ ತಾಲೂಕಿನಾದ್ಯಂತ 17 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಂಡಿವೆ. ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆ, ಪಾಣೆಮಂಗಳೂರು ಶ್ರೀಮತಿ ಲಕ್ಷ್ಮೀದೇವಿ ನರಸಿಂಹ ಪೈ ವಿದ್ಯಾಲಯ, ಮೊಡಂಕಾಪು ದೀಪಿಕಾ ಪ್ರೌಢಶಾಲೆ, ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಬಾಲಿಕೆಯರ ಪ್ರೌಢಶಾಲೆ, ವಿಠಲ ಪದವಿಪೂರ್ವ ಕಾಲೇಜು ವಿಟ್ಲ, ವಿಠಲ ಪ್ರೌಢಶಾಲೆ ವಿಟ್ಲ, ಬಂಟ್ವಾಳ ಎಸ್.ವಿ.ಎಸ್. ಪ್ರೌಢಶಾಲೆ, ಅಳಿಕೆ ಸತ್ಯಸಾಯಿ ಪ್ರೌಢಶಾಲೆ, ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ, ವಾಮದಪದವು ಸರಕಾರಿ ಪದವಿಪೂರ್ವ ಕಾಲೇಜು, ಕುರ್ನಾಡು ಸರಕಾರಿ ಪದವಿಪೂರ್ವ ಕಾಲೇಜು, ಮಾಣಿ ಕರ್ನಾಟಕ ಪ್ರೌಢಶಾಲೆ, ತುಂಬೆ ಪದವಿಪೂರ್ವ ಕಾಲೇಜು,  ಕನ್ಯಾನ ಸರಕಾರಿ ಪದವಿಪೂರ್ವ ಕಾಲೇಜು, ಕಾವಳಪಡೂರು ವಗ್ಗ ಸರಕಾರಿ ಪದವಿಪೂರ್ವ ಕಾಲೇಜು, ಮೊಂಟೆಪದವು ಸರಕಾರಿ ಪದವಿಪೂರ್ವ ಕಾಲೇಜು, ಕೊಳ್ನಾಡು ಸರಕಾರಿ ಪ್ರೌಢಶಾಲೆ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿವೆ.

ಗುರುವಾರ ನಡೆದ  ಪರೀಕ್ಷೆಗೆ 5250 ಮಂದಿ ಹಾಜರಾಗಬೇಕಿತ್ತು. ಆದರೆ 60 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಇವರಲ್ಲಿ 40 ಹುಡುಗರು, 20 ಹುಡುಗಿಯರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಮಾಹಿತಿ ನೀಡಿದರು.

ಬ್ಯಾನರ್, ಸ್ವಾಗತ  ಗೇಟ್ ಮುಂಭಾಗ ಸ್ವಾಗತದ ಬ್ಯಾನರ್, ಶಾಮಿಯಾನ, ಬಣ್ಣಬಣ್ಣದ ಬಟ್ಟೆ, ಬಲೂನುಗಳಿಂದ ಸಿಂಗರಿಸಿದ ಶಾಲಾ ಮೈದಾನ ಯಾವುದೋ ಪ್ರತಿಭೋತ್ಸವದಂತೆ ತೋರುವ ವ್ಯವಸ್ಥೆಯನ್ನು ಹೊಂದಿದ್ದ ವಗ್ಗ ಸರಕಾರಿ ಪ್ರೌಢಶಾಲಾ ಪರೀಕ್ಷಾ ಕೇಂದ್ರ ಗಮನ ಸೆಳೆಯಿತು. ತಾಲೂಕಿನ ಮೊಂಟೆಪದವು ಕೇಂದ್ರದಲ್ಲಿ ಮೂರು ಧರ್ಮಗಳ ಗುರುಗಳು ಬಂದು ವಿದ್ಯಾರ್ಥಿಗಳಿಗೆ ಆಶೀರ್ವಾದ ಮಾಡಿದರು. ಬ್ಯಾಂಡ್, ವಾದ್ಯಗಳೊಂದಿಗೆ ವಿದ್ಯಾರ್ಥಿಗಳನ್ನು ಅಲ್ಲಿ ಸ್ವಾಗತಿಸಲಾಯಿತು. ಉಪಾಹಾರ, ಪಾನೀಯ ವ್ಯವಸ್ಥೆಯನ್ನೂ ಮಾಡಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.