ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಎಂಟನೇ ಪಟ್ಟಿಯನ್ನು ಶನಿವಾರ ರಾತ್ರಿ ಪ್ರಕಟಿಸಿದೆ. ಇದರಲ್ಲಿ ಕರ್ನಾಟಕದ ಹದಿನೆಂಟು ಕ್ಷೇತ್ರಗಳ ಅಭ್ಯರ್ಥಿಗಳನ್ನು ಸಹ ಘೋಷಿಸಲಾಗಿದೆ. ಇದು ರಾಜ್ಯದಲ್ಲಿನ ಕ್ಷೇತ್ರಗಳಿಗೆ ಕಾಂಗ್ರೆಸ್ ಪ್ರಕಟಿಸುತ್ತಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಾಗಿದೆ.
ಅದರಂತೆ ದಕ್ಷಿಣ ಕನ್ನಡ ಕ್ಷೇತ್ರದಿಂದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಚಿಕ್ಕೋಡಿಯಿಂದ ಪ್ರಕಾಶ್ ಹುಕ್ಕೇರಿ, ಬೆಳಗಾವಿ – ವಿರುಪಾಕ್ಷಿ ಎಸ್. ಸಾಧುನವರ್, ಬಾಗಲಕೋಟೆ– ವೀಣಾ ಕಾಶಪ್ಪನವರ್, ಕಲಬುರ್ಗಿ (ಎಸ್ಸಿ) – ಮಲ್ಲಿಕಾರ್ಜುನ ಖರ್ಗೆ. ರಾಯಚೂರು (ಎಸ್ಸಿ) – ಬಿ.ವಿ. ನಾಯಕ್, ಬೀದರ್– ಈಶ್ವರ ಖಂಡ್ರೆ, ಕೊಪ್ಪಳ– ರಾಜಶೇಖರ ಹಿಟ್ನಾಳ್, ಬಳ್ಳಾರಿ (ಎಸ್ಟಿ)- ವಿ.ಎಸ್. ಉಗ್ರಪ್ಪ, ಹಾವೇರಿ– ಡಿ.ಆರ್. ಪಾಟೀಲ್, ದಾವಣಗೆರೆ– ಶಾಮನೂರು ಶಿವಶಂಕರಪ್ಪ, ದಕ್ಷಿಣ ಕನ್ನಡ– ಮಿಥುನ್ ರೈ, ಚಿತ್ರದುರ್ಗ (ಎಸ್ಸಿ)- ಬಿ.ಎಸ್. ಚಂದ್ರಪ್ಪ, ಮೈಸೂರು–ಕೊಡಗು– ಸಿ.ಎಚ್. ವಿಜಯಶಂಕರ್, ಚಾಮರಾಜನಗರ– ಆರ್. ಧ್ರುವನಾರಾಯಣ, ಬೆಂಗಳೂರು ಗ್ರಾಮಾಂತರ– ಡಿಕೆ ಸುರೇಶ್, ಬೆಂಗಳೂರು ಕೇಂದ್ರ– ರಿಝ್ವಾನ್ ಅರ್ಷದ್, ಚಿಕ್ಕಬಳ್ಳಾಪುರ– ಎಂ. ವೀರಪ್ಪ ಮೊಯಿಲಿ, ಕೋಲಾರ (ಎಸ್ಸಿ)- ಕೆ.ಎಚ್. ಮುನಿಯಪ್ಪ ಅವರುಗಳನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…