Categories: ಕಲ್ಲಡ್ಕ

ಕಲ್ಲಡ್ಕದಲ್ಲಿ ಮಾತೆಯರಿಗೆ ಪಾದಪೂಜೆ, ಮಕ್ಕಳ ಹುಟ್ಟುಹಬ್ಬ ಆಚರಣೆ

ಶ್ರೀರಾಮ ಶಿಶುಮಂದಿರ ಕಲ್ಲಡ್ಕದಲ್ಲಿ ಮಾತೆಯರ ಪಾದಪೂಜೆ ಮತ್ತು ಮಾರ್ಚ್, ಎಪ್ರಿಲ್, ಮೇ ತಿಂಗಳಲ್ಲಿ ಹುಟ್ಟಿದ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ನಡೆಯಿತು.

ಜಾಹೀರಾತು

ಮಕ್ಕಳಿಗೆ ತಾಯಂದಿರ ಕೇವಲ ಪಾದಗಳು ಮಾತ್ರ ಕಾಣುವರೀತಿಯಲ್ಲಿ ಪರದೆಯನ್ನುಕಟ್ಟಲಾಗಿತ್ತು. ಪುಟಾಣಿಗಳು ಅಮ್ಮನ ಪಾದವನ್ನೇನೋಡಿ ಗುರುತಿಸಿ ಅದರ ಪಕ್ಕದಲ್ಲಿ ಕುಳಿತು ಕೊಳ್ಳುತ್ತಿದ್ದರು. ನಂತರ ಪರದೆಯನ್ನು ಬಿಚ್ಚಲಾಗಿತ್ತು. ಎಲ್ಲಾ ಪುಟಾಣಿಗಳು ಅವರ ಅಮ್ಮನ ಪಾದಗಳಿಗೆ ನೀರು ಹಾಕಿ ಅರಶಿನ ಕುಂಕುಮ ಹಚ್ಚಿ ಪುಷ್ಪವನ್ನು ಅರ್ಪಿಸಿ ಪಾದಪೂಜೆ ಮಾಡಿದರು.

ಮಕ್ಕಳಿಗೆ ಆರತಿಎತ್ತಿ,ತಿಲಕಇಟ್ಟು, ಅಕ್ಷತೆ ಹಾಕಿ, ಸಿಹಿಯನ್ನು ನೀಡಿ ಮಾತೆಯರು ಶುಭ ಹಾರೈಸಿ ೫೨ ಮಕ್ಕಳ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ವಸಂತ ಮಾಧವ ನಾಗೇಶ್ ಕಲ್ಲಡ್ಕಹಾಗೂ ಡಾ. ಕಮಲಾ ಭಟ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ೧೪೧ ಮಾತೆಯರು ಭಾಗವಹಿಸಿದರು. ಕಾರ್ಯಕ್ರಮವನ್ನು ವಿದ್ಯಾ ಸ್ವಾಗತಿಸಿ, ರೋಹಿಣಿ ಅಶೋಕ್ ವಂದಿಸಿ, ಪರಿಮಳ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts