Categories: ಬಂಟ್ವಾಳ

ರಾಷ್ಟ್ರೀಯ ಕರಾಟೆ ಸ್ಪರ್ಧೆ, ಕರ್ನಾಟಕ ಪ್ರತಿನಿಧಿಸಲು ಸಹೋದರ-ಸಹೋದರಿ ಆಯ್ಕೆ

ಬಂಟ್ವಾಳ: ಬಂಟ್ವಾಳ ಮತ್ತು ಮೂಡುಬಿದ್ರೆಯಲ್ಲಿ ಓದುತ್ತಿರುವ ತಾಲೂಕಿನ ಇಬ್ಬರು ಸಹೋದರ-ಸಹೋದರಿ ಮುಂದಿನ ತಿಂಗಳು ಅಸ್ಸಾಂನ ಗುಹಾವಟಿ ಮತ್ತು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಗೆ ಕರ್ನಾಟಕ ಪ್ರತಿನಿಧಿಸಲು ಆಯ್ಕೆಯಾಗಿ ಗಮನ ಸೆಳೆದಿದ್ದಾರೆ.

ಜಾಹೀರಾತು

ಮೂಡುಬಿದ್ರೆ ಪಾಲಿಟೆಕ್ನಿಕ್ ವಿದ್ಯಾರ್ಥಿ ಮೋಕ್ಷಿತ್ ಎಂ.ಶೆಟ್ಟಿ ಮತ್ತು ಇವರ ಸಹೋದರಿ ಬಂಟ್ವಾಳ ಎಸ್‌ವಿಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಹನಾ ಎಂ.ಶೆಟ್ಟಿ ಇವರು ೫೫ ಕೆ.ಜಿ. ಮತ್ತು ೫೦ ಕೆ.ಜಿ. ಕುಮಿಟೆ ವೈಯಕ್ತಿಕ ವಿಭಾಗದಲ್ಲಿ ರಾಜ್ಯವನ್ನು ಪ್ರತಿನಿಧಿಸುವರು.

ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಕರ್ನಾಟಕ ಕರಾಟೆ ಡೂ ಸ್ಪೋರ್ಟ್ಸ್ ಎಸೋಸಿಯೇಶನ್ ವತಿಯಿಂದ ಇದೇ ೨೨ರಂದು ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಇವರು ಪ್ರಥಮ ಸ್ಥಾನ ಗೆದ್ದುಕೊಂಡಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್ ಜೊತೆಗೆ ಸ್ವತಃ ಭರತನಾಟ್ಯ ಕಲಾವಿದೆಯಾಗಿರುವ ಸಹನಾ ಎಂ.ಶೆಟ್ಟಿ ಇವರು ಏ.೪ರಿಂದ ೭ರತನಕ ಅಸ್ಸಾಂನ ಗುವಾಹಟಿಯಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವರು.

ಜಾಹೀರಾತು

ಸಿವಿಲ್ ಎಂಜಿನಿಯರ್ ಓದುತ್ತಿರುವ ಸಹೋದರ ಮೋಕ್ಷಿತ್ ಎಂ.ಶೆಟ್ಟಿ ದೆಹಲಿಯಲ್ಲಿ ಏ.೨೪ರಿಂದ ೨೭ರತನಕ ನಡೆಯುವ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವರು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ