Categories: ಬಂಟ್ವಾಳ

26ರಿಂದ 29ರವರೆಗೆ ಕಾನೂನು ಸಾಕ್ಷರತಾ ರಥ ಸಂಚಾರ

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ ಬಂಟ್ವಾಳ, ಸಾರ್ವಜನಿಕ ಶಿಕ್ಷಣ ಇಲಾಖೆ, ಬಂಟ್ವಾಳ ತಾಲೂಕು ಪಂಚಾಯತ್, ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ಮಾ.26ರಿಂದ 29ರವರೆಗೆ ಕಾನೂನು ಸಾಕ್ಷರತಾ ರಥ ಮತ್ತು ಸಂಚಾರಿ ನ್ಯಾಯಾಲಯದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು

ಮಾ. 26 ರಂದು ಬೆಳಿಗ್ಗೆ ೧೦:೩೦ಕ್ಕೆ ಬಂಟ್ವಾಳ ನ್ಯಾಯಾಲಯದ ಆವರಣದಲ್ಲಿ ಕಾನೂನು ಸಾಕ್ಷರತಾ ರಥಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಮುಹಮ್ಮದ್ ಇಮ್ತಿಯಾಝ್ ಅಹ್ಮದ್ ಚಾಲನೆ ನೀಡುವರು. ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 12ಕ್ಕೆ ಕೊಡಂಗೆ ಸರಕಾರಿ ಪ್ರೌಢಶಾಲೆ, ಸಂಜೆ 3ಕ್ಕೆ ಪುದು ಗ್ರಾಪಂ ವಠಾರದಲ್ಲಿ ಸಂಚರಿಸಲಿದೆ.

ಮಾ. ೨೭ರಂದು ಬೆಳಿಗ್ಗೆ ೧೦ಕ್ಕೆ ಗೊಳ್ತಮಜಲು ಗ್ರಾಪಂ, ಮಧ್ಯಾಹ್ನ ೧೨ಕ್ಕೆ ನಂದಾವರ ಸರಕಾರಿ ಪ್ರೌಢಶಾಲೆ, ಸಂಜೆ ೩ಕ್ಕೆ ಮಾಣಿ ಗ್ರಾಪಂ., ಮಾ. ೨೮ರಂದು ಬೆಳಿಗ್ಗೆ ೧೦ಕ್ಕೆ ಅಮ್ಟಾಡಿ ಗ್ರಾಪಂ, ಮಧ್ಯಾಹ್ನ ೧೨ಕ್ಕೆ ಕೊಯಿಲಾ ಸರಕಾರಿ ಪ್ರೌಢಶಾಲೆ, ಸಂಜೆ ೩ಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಸಭಾಂಗಣ. ಮಾ. ೨೯ರಂದು ಬೆಳಿಗ್ಗೆ ೧೦ಕ್ಕೆ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಧ್ಯಾಹ್ನ ೧೨ಕ್ಕೆ ತುಂಬೆ ಬಿ.ಎ.ಕೈಗಾರಿಕಾ ತರಬೇತಿ ಸಂಸ್ಥೆ, ಸಂಜೆ ೪ಕ್ಕೆ ಬಿ.ಸಿ.ರೋಡ್ ನ್ಯಾಯಾಲಯದ ಆವರಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿಯ ಪ್ರಕಟನೆ ತಿಳಿಸಿದೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.