ನಾಟಕ, ಪ್ರೇಕ್ಷಕನ ಸಂಬಂಧ ಗಟ್ಟಿಗೊಳಿಸಲು ಪ್ರಯತ್ನ ಅಗತ್ಯ: ಬಾಸುಮ ಕೊಡಗು

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ನಾಟಕ ಹಾಗೂ  ಪ್ರೇಕ್ಷಕರ ನಡುವಣ ನಂಟು ಮತ್ತಷ್ಟು ಗಟ್ಟಿಯಾಗಬೇಕಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಬಾಸುಮ ಕೊಡಗು ಹೇಳಿದರು.

ಜಾಹೀರಾತು

Pic: Ram Naresh Manchi

ಖ್ಯಾತ ರಂಗಕರ್ಮಿ ಬಿ.ವಿ. ಕಾರಂತ ಹುಟ್ಟೂರಾದ ಬಂಟ್ವಾಳ ತಾಲೂಕಿನ ಮಂಚಿ ಕುಕ್ಕಾಜೆಯಲ್ಲಿರುವ ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ವತಿಯಿಂದ ಕರ್ನಾಟಕ ನಾಟಕ ಅಕಾಡೆಮಿ ಪ್ರಾಯೋಜಕತ್ವದಲ್ಲಿ ಲಯನ್ಸ್ ಕ್ಲಬ್ ಸಾಲೆತ್ತೂರು ಮಂಚಿ ಸಹಕಾರದೊಂದಿಗೆ ಬುಧವಾರ ಸಂಜೆ ಲಯನ್ಸ್ ಸಭಾಭವನ ಮಂಚಿಯಲ್ಲಿ ನಡೆದ ವಿಶ್ವ ರಂಗಭೂಮಿ ದಿನಾಚರಣೆಯ ಅಧ್ಯಕ್ಷತೆ ವಹಿಸಿ, ಹಿರಿಯ ರಂಗ ಕಲಾವಿದ ಮಂಜು ವಿಟ್ಲ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.

ರಂಗಚಟುವಟಿಕೆಗಳನ್ನು ನಡೆಸಲು ಹಾಗೂ ನಾಟಕದ ಕುರಿತು ಅರಿವು ಮೂಡಿಸಲು ರಂಗಮಂದಿರಗಳ ನಿರ್ಮಾಣದ ಅವಶ್ಯಕತೆಯನ್ನು ಒತ್ತಿ ಹೇಳಿದ ಅವರು, ಪ್ರತಿಯೊಂದು ತಾಲೂಕಿನಲ್ಲೂ ರಂಗಮಂದಿರಗಳನ್ನು ನಿರ್ಮಿಸುವ ಅವಶ್ಯಕತೆ ಇದ್ದು, ಈ ಕುರಿತು ಕಲಾವಿದರು ಮತ್ತು ಕಲಾಸಕ್ತರು ಸಂಘಟಿತರಾಗಿ ಹಕ್ಕೊತ್ತಾಯ ಮಂಡಿಸುವ ಅವಶ್ಯಕತೆ ಇದೆ ಎಂದು ಬಾಸುಮ ಅಭಿಪ್ರಾಯಪಟ್ಟರು.

ಹೊಸತನಗಳು ಆಧುನಿಕ ರಂಗಭೂಮಿಯಲ್ಲಿ ನಿತ್ಯನಿರಂತರವಾಗಿದೆ. ಯಾವುದೇ ನಾಟಕಗಳು ನಾಟಕಕಾರ, ನಿರ್ದೇಶಕನ ಪರಿಕಲ್ಪನೆಯಲ್ಲಿ ಮೂಡಿಬಂದರೂ  ರಂಗಭೂಮಿಯಲ್ಲಿ ನಟನೇ ಸವ್ಯಸಾಚಿ. ಕ್ಯೂಬಾದ ರಂಗಕರ್ಮಿ ಕಾರ್ಲೋಸ್ ಸೆಲ್ಡ್ರಾನ್ ನ ಈ ಬಾರಿಯ ರಂಗಸಂದೇಶದಂತೆ ಪ್ರತಿಯೊಬ್ಬರು ರಂಗಕಾಯಕಗಳಿಗೆ ಜಾಗ ಹುಡುಕಬೇಕಿಲ್ಲ, ನೀನೆಲ್ಲಿರುವೆಯೋ ಅಲ್ಲೇ ಪ್ರೇಕ್ಷಕರಿದ್ದಾರೆ ಎಂಬುವುದನ್ನು ರಂಗಕರ್ಮಿಗಳು ಮನನ ಮಾಡಿಕೊಂಡು ಮುನ್ನಡೆಯಬೇಕಿದೆ ಎಂದು ಅವರು ಹೇಳಿದರು.

ಜಾಹೀರಾತು

ಈ ಸಂದರ್ಭ ಹಿರಿಯ ರಂಗ ಕಲಾವಿದ ಹಾಗೂ ಸಂಘಟಕ ಮಹಾಬಲೇಶ್ವರ ಹೆಬ್ಬಾರ ಅವರು ಆಧುನಿಕ ರಂಗಭೂಮಿಯ ಸ್ಥಿತಿಗತಿಗಳ ಕುರಿತು ಉಪನ್ಯಾಸ ನೀಡಿದರು.

ಹಿರಿಯ ರಂಗಕಲಾವಿದ ಮಂಜು ವಿಟ್ಲ ಅವರನ್ನು ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಸನ್ಮಾನಿಸಲಾಯಿತು. ಈ ಸಂದರ್ಭ ಮಂಜು ವಿಟ್ಲ ಅವರು ವಿಟ್ಲದಲ್ಲಿ ದಶಕಗಳ ಹಿಂದೆ ಅಭಿನಯಿಸಿದ ತುಳು ಭಾಷೆಯಲ್ಲಿ ಪ್ರಯೋಗವಾದ ಚೋಮನ ದುಡಿಯ ಚೋಮನ ಪಾತ್ರವನ್ನು ಕಟ್ಟಿಕೊಟ್ಟ ವಿಚಾರವನ್ನು ಹಿರಿಯ ರಂಗಕರ್ಮಿ ಮೂರ್ತಿ ದೇರಾಜೆ, ಮಂಜು ಅವರ ಜೀವನಸಾಧನೆಯನ್ನು ತೆರೆದಿಟ್ಟರು.

ಮುಖ್ಯ ಅತಿಥಿಗಳಾಗಿದ್ದ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ, ರಂಗಕರ್ಮಿ, ಪತ್ರಕರ್ತ ಮೌನೇಶ ವಿಶ್ವಕರ್ಮ ಮತ್ತು ಮಂಚಿ-ಸಾಲೆತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷ ಮನರಂಜನ್ ಶುಭ ಹಾರೈಸಿದರು.

ಜಾಹೀರಾತು

ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಅಧ್ಯಕ್ಷ ನ್ಯಾಯವಾದಿ ಕಜೆ ರಾಮಚಂದ್ರ ಭಟ್ ಸ್ವಾಗತಿಸಿದರು. ಸದಸ್ಯ ರಮಾನಂದ ನೂಜಿಪ್ಪಾಡಿ ವಂದಿಸಿದರು. ನ್ಯಾಯವಾದಿ ರವೀಂದ್ರ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮುನ್ನ ಸೀತಾರಾಮ ಕೇವಳ ನೇತೃತ್ವದಲ್ಲಿ ಪುತ್ತೂರಿನ ರಂಗದೀಪ ತಂಡದ ಕಲಾವಿದರು ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ರಂಗಗೀತೆಗಳನ್ನು ಹಾಡಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ