Categories: ಬಂಟ್ವಾಳ

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ: ಬಾಲಾಲಯ ಪ್ರತಿಷ್ಠೆಗೆ ಶಿಲಾನ್ಯಾಸ

ಬಂಟ್ವಾಳ ತಾಲೂಕು ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ ಬಾಲಾಲಯ ಪ್ರತಿಷ್ಠೆಗೆ ಶಿಲಾನ್ಯಾಸ ಸಮಾರಂಭ ಗುರುವಾರ ಪುರೋಹಿತ ವಿಜಯಕೃಷ್ಣ ಐತಾಳ್ ಪುಂಜೂರು ಹಾಗೂ ಕ್ಷೇತ್ರದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಅವರ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರಗಿತು. ಪುರೋಹಿತ ಗಣಪತಿ ಐತಾಳ್ ಮಾರ್ಗದರ್ಶನ ನೀಡಿದರು.
ಬಾಲಾಲಯ ನಿರ್ಮಾಣ ಕಾಮಗಾರಿ ನಿರ್ವಹಿಸುವ ಹರೀಶ್ ಹಂಚಿಕಟ್ಟೆ ಹಾಗೂ ಹರೀಶ್ ಮಠದಬೆಟ್ಟು ಅವರಿಗೆ ಜೀರ್ಣೋದ್ಧಾರ ಸಮಿತಿಯಿಂದ ಪ್ರಸಾದ ನೀಡಲಾಯಿತು.
ಕ್ಷೇತ್ರದ ಮೊಕ್ತೇಸರರಾದ ಚಂದ್ರಹಾಸ ಶೆಟ್ಟಿ ಎಚ್., ಕೊರಗಪ್ಪ ಗೌಡ, ವಿಠಲ್ ಎಂ, ಉಮೇಶ್ ಆಳ್ವ, ದಯಾನಂದ ಕೋಡಿ, ಗಿರಿಧರ್ ಎಸ್, ಸುರೇಂದ್ರ ಪೈ, ಜೀರ್ಣೋದ್ಧಾರ ಸಮಿತಿಯ ಕುಸುಮಾಕರ ಶೆಟ್ಟಿ, ಪುರುಷೋತ್ತಮ ಪೂಜಾರಿ, ಧನಂಜಯ ಶೆಟ್ಟಿ ನಾಡಬೆಟ್ಟು, ರಾಧಾಕೃಷ್ಣ ರೈ ಕೊಟ್ಟುಂಜ, ರಾಮಣ್ಣ ಶೆಟ್ಟಿ ಕಲ್ಕೊಟ್ಟೆ, ಶಶಿಕಾಂತ ಶೆಟ್ಟಿ, ಶಿವರಾಮ ಶೆಟ್ಟಿ ದೋಟ, ಶಿವರಾಮ ಭಂಡಾರಿ, ಆನಂದ ಶೆಟ್ಟಿ ಆರುಮುಡಿ, ಎಸ್.ಪಿ.ಸರಪಾಡಿ, ಸಂತೋಷ್ ಶೆಟ್ಟಿ, ಚೇತನ್ ಬಜ, ರಾಹುಲ್ ಕೋಟ್ಯಾನ್, ಸುಂದರ ಬಾಚಕೆರೆ, ಚಿನ್ನಯ ನಾಯ್ಕ್, ವ್ಯವಸ್ಥಾಪಕ ಗಿರೀಶ್ ನಾಯ್ಕ್ ಮೊದಲಾದವರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ