Categories: ಬಂಟ್ವಾಳ

ಸ್ಪರ್ಧೆ ನಮ್ಮ ಮತ್ತು ಬಿಜೆಪಿ ಮಧ್ಯೆ – ಎಸ್.ಡಿ.ಪಿ.ಐ

ಕಾಂಗ್ರೆಸ್ ಪಕ್ಷದ ಜನಪ್ರಿಯತೆ ಕಡಿಮೆಯಾಗುತ್ತಿದೆ. ಎಲ್ಲ ಸಮುದಾಯದವರಿಗೂ ಎಸ್.ಡಿ.ಪಿ.ಐ. ಮೇಲೆ ಭರವಸೆ ಮೂಡಿದೆ. ಈಗೇನಿದ್ದರೂ ಬಿಜೆಪಿ ಮತ್ತು ಎಸ್.ಡಿ.ಪಿ.ಐ. ನಡುವೆ ನೇರ ಸ್ಪರ್ಧೆ ಎಂದು ದಕ್ಷಿಣ ಕನ್ನಡ ಲೋಕಸಭೆಯಲ್ಲಿ ಎಸ್.ಡಿ.ಪಿ.ಐ. ಪರ ಕಣಕ್ಕಿಳಿದಿರುವ ಮುಖಂಡ ಇಲ್ಯಾಸ್ ಮಹಮ್ಮದ್ ತುಂಬೆ ಹೇಳಿದ್ದಾರೆ.

ಜಾಹೀರಾತು

ಅವರು ಬಂಟ್ವಾಳದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ಪರ್ಧೆ ಈಗಿರುವುದು ನಮ್ಮ ಮತ್ತು ಬಿಜೆಪಿ ಮಧ್ಯೆ ಮಾತ್ರ, ಕಾಂಗ್ರೆಸ್ ತೃತೀಯ ಸ್ಥಾನಕ್ಕೆ ತಳ್ಳಲ್ಪಡುತ್ತದೆ ಎಂದು ಭವಿಷ್ಯ ನುಡಿದರು.

ಈಗಾಗಲೇ ಕ್ಷೇತ್ರಾದ್ಯಂತ ಸಂಚರಿಸುತ್ತಿದ್ದು, ಹಾಲಿ ಸಂಸದರ ವಿರುದ್ಧ ಜನಾಕ್ರೋಶವಿದೆ. ಮೀನುಗಾರರು, ಬಡವರ ಪರ ಧ್ವನಿ ಎತ್ತದ ಕುರಿತು ಜನರು ಮಾತನಾಡಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಎಸ್.ಡಿ.ಪಿ.ಐ. ಜನಪರ ಕೆಲಸ ಮಾಡಲಿದೆ. ಕೋಮುವಾದ, ನಿಷ್ಕ್ರಿಯ ರಾಜಕಾರಣಗಳಿಂದ ದಕ್ಷಿಣ ಕನ್ನಡ ಹಿಂದುಳಿದಿದ್ದು, ಇದು ಮರುಕಳಿಸದಂತೆ ಜನ ಜಾಗೃತರಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಯನ್ನು ತಿರಸ್ಕರಿಸಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭ ಪಕ್ಷ ಪ್ರಮುಖರಾದ ಶಾಹುಲ್ ಹಮೀದ್, ರಿಯಾಜ್ ಫರಂಗಿಪೇಟೆ, ಅನ್ವರ್ ಸಾದತ್, ಹನೀಫ್ ಖಾನ್ ಕೊಡಾಜೆ, ಮುನೀಷ್ ಆಲಿ, ಇಸ್ಮಾಯಿಲ್ ಬಾವಾ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ