Categories: ಬಂಟ್ವಾಳ

ಕೇಂದ್ರ ಸರಕಾರದಿಂದ ಜನರಿಗೇನೂ ಲಾಭವಾಗಿಲ್ಲ: ಅಶ್ವನಿ ಕುಮಾರ್ ರೈ

ಬಿಜೆಪಿಯಿಂದ ಕೇಂದ್ರದಿಂದಲೂ, ಇಲ್ಲಿನ ಸಂಸದರಿಂದಲೂ ಜನರಿಗೆ ಅನುಕೂಲವಾಗುವಂತಹ ಯಾವುದೇ ಕಾರ್ಯಕ್ರಮಗಳು ಜಾರಿಯಾಗಿಲ್ಲ ಎಂದು ಹೇಳಿರುವ ಕೆಪಿಸಿಸಿ ಕಾರ್ಯದರ್ಶಿ ಎಂ ಅಶ್ವನಿ ಕುಮಾರ್ ರೈ, ಈ ಬಾರಿ ಯುವ ನಾಯಕರೊಬ್ಬರನ್ನು ಕಣಕ್ಕಿಳಿಸಿದ್ದು, ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.

ಜಾಹೀರಾತು

ಸೋಮವಾರ ಬಿ ಸಿ ರೋಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಲ ಕಾಲಕ್ಕೆ ಪಂಚಿಂಗ್ ಡೈಲಾಗ್ ನೀಡಿ ಜನರನ್ನು ನಂಬುವಂತೆ ಮಾಡಿದ್ದೇ ಮೋದಿ ಸರಕಾರಿ ದೊಡ್ಡ ಸಾಧನೆ ಎಂದರು.

ಜಿಲ್ಲೆಗೆ ಸಂಬಂಧಪಟ್ಟಂತೆ ಕಳೆದ ಹತ್ತು ವರ್ಷಗಳಲ್ಲಿ ನಳಿನ್ ಕುಮಾರ್ ಸಾಧನೆ ಶೂನ್ಯ. ಈ ನಿಟ್ಟಿನಲ್ಲಿ ಯುವ ಹಾಗೂ ಉತ್ಸಾಹಿ ಕಾರ್ಯಕರ್ತನಿಗೆ ಕಾಂಗ್ರೆಸ್ ಈ ಬಾರಿ ಅವಕಾಶ ನೀಡಿದ್ದು, ಇಂತಹ ಉತ್ಸಾಹಿ ಯುವ ನಾಯಕರನ್ನು ಲೋಕಸಭೆಗೆ ಕಳುಹಿಸಬೇಕಾಗಿದೆ ಎಂದು ಕರೆ ನೀಡಿದರು.

ಈ ಸಂದರ್ಭ ಪಕ್ಷ ಪ್ರಮುಖರಾದ ಸದಾಶಿವ ಬಂಗೇರ, ನೋಣಯ್ಯ ಪೂಜಾರಿ, ಜಯರಾಂ ಸಾಮಾನಿ ತುಂಬೆ, ಶರೀಫ್ ಶಾಂತಿಅಂಗಡಿ, ಉಮ್ಮರ್ ಮಂಚಿ, ಸ್ಟೀವನ್, ಇಕ್ಬಾಲ್, ಬಾಲಚಂದ್ರ ಶೆಟ್ಟಿ, ಗೋಪಾಲಕೃಷ್ಣ ಸುವರ್ಣ, ಡಿ ಕೆ ಹಂಝ, ಕರೀಂ ಬೊಳ್ಳಾಯಿ ಮೊದಲಾದವರು ಜೊತೆಗಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ