Categories: ಬಂಟ್ವಾಳ

ಸಾಮಾನ್ಯರೂ ಇತಿಹಾಸದ ಒಂದು ಭಾಗ, ಅವರ ಕೊಡುಗೆಯ ಅಧ್ಯಯನ ಅಗತ್ಯ: ಡಾ. ಪೀಟರ್ ವಿಲ್ಸನ್ ಪ್ರಭಾಕರ್

ಇತಿಹಾಸವೆಂದರೆ ಕೇವಲ ರಾಜ ಮಹಾರಾಜರ ಸಾಧನೆ ಸಾಹಸಗಳ ದಾಖಲೆ ಎಂದು ಭ್ರಮಿಸಿದ ಕಾಲವೊಂದಿತ್ತು. ಆದರೆ ಬದಲಾದ ಈ ಕಾಲ ಘಟ್ಟದಲ್ಲಿ ಇತಿಹಾಸದ ಬಗೆಗಿನ ದೃಷ್ಟಿಕೋನವೂ ಬದಲಾಗಿದೆ. ಸಾಮಾನ್ಯರೂ ಇತಿಹಾಸದ ಒಂದು ಭಾಗ. ಅವರ ಬೇಕು ಬೇಡಗಳ, ದುಃಖ ದುಮ್ಮಾನಗಳ ಅಥವಾ ಅವರ ಕೊಡುಗೆಗಳು ದಾಖಲಾಗದೇ ಹೋದಲ್ಲಿ ಅದು ಪರಿಪೂರ್ಣ ಇತಿಹಾಸವೆನಿಸಲಾರದು, ಎಂದು ಪುತ್ತೂರಿನ ಸ್ವಾಮಿ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲರಾದ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಅವರು ಹೇಳಿದರು.

ಜಾಹೀರಾತು

ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಪ್ರೊ.ತುಕಾರಾಂ ಪೂಜಾರಿ ಹಾಗೂ ಡಾ.ಆಶಾಲತ ಸುವರ್ಣ ಅವರು ಸಂಪಾದಿಸಿ ಪ್ರಕಟಿಸಿದ ಭೌತಿಕ ಶೋಧ ಸ್ವರೂಪ ಮತ್ತು ತಾತ್ವಿಕತೆ ಎಂಬ ಕೃತಿಯನ್ನು ಭಾನುವಾರ ಪೆರ್ನೆಯಲ್ಲಿ ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು.

ಈ ಕೃತಿಯು ಈವರೆಗೆ ಕಡೆಗಣಿಸಲ್ಪಟ್ಟ ಇತಿಹಾಸಕ್ಕೆ ಪೂರಕ ಆಕರವಾಗಬಲ್ಲ ಭೌತಿಕ ವಸ್ತುಗಳ ಮತ್ತು ಮೌಖಿಕ ಇತಿಹಾಸದ ಮಹತ್ವವನ್ನು ಎತ್ತಿ ಹಿಡಿದಿದೆ ಎಂದರು.

ಕೃತಿಯ ಕುರಿತಾಗಿ ಮಾತನಾಡಿದ ಬಿ.ಸಿ.ರೋಡಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಗಿರೀಶ್ ಭಟ್ ಅಜೆಕ್ಕಳ ಮಾತನಾಡುತ್ತಾ, ದಾಖಲೆಗಳ  ಆಧಾರದಲ್ಲಿ ರಚಿಸಲಾಗುವ ಇತಿಹಾಸದಲ್ಲಿ ಘಟನಾವಳಿಗಳಿಗಷ್ಟೇ ಪ್ರಾಧಾನ್ಯತೆ ಸೀಮಿತವಾಗಿರುತ್ತದೆ. ಈ ಸಾಂಪ್ರದಾಯಿಕ ಮಾದರಿಯ ಇತಿಹಾಸದ ರಚನೆಯ ಹೊರತಾಗಿಯೂ ಚರಿತ್ರೆ ರಚನೆ ಸಾಧ್ಯ ಎಂಬುವುದನ್ನು ಈ ಕೃತಿಯಲ್ಲಿ ಚರ್ಚಿಸಲಾಗಿದೆ. ವಿವಿಧ ವಿದ್ವಾಂಸರುಗಳ ಪ್ರಬುದ್ಧ ಲೇಖನಗಳನ್ನೊಳಗೊಂಡ ಈ ಕೃತಿಯು ಒಂದು ಅಮೂಲ್ಯ ಸಂಶೋಧನಾ ಕೃತಿಯಾಗಿ ಮೂಡಿಬಂದಿದೆ ಎಂದು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಹಿರಿಯ ಸಾಹಿತಿ ಡಾ.ಏರ್ಯ ಲಕ್ಷ್ಮೀ ನಾರಾಯಣ ಆಳ್ವ, ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕರಾದ ಡಾ.ಗಣೇಶ್ ಅಮೀನ್ ಸಂಕಮಾರ್, ವಿವೇಕಾನಂದ ಕಾಲೇಜಿನ ಉಪನ್ಯಾಸಕರಾದ ಡಾ.ಶ್ರೀಷ ಕುಮಾರ್ ,ಕೆ.ಎಂ.ಬಾಲಕೃಷ್ಣ, ಕೃತಿಯ ಸಂಪಾದಕರಾದ ಪ್ರೊ.ತುಕಾರಾಂ ಪೂಜಾರಿ ಮತ್ತು ಡಾ ಆಶಾಲತಾ ಸುವರ್ಣ, ಉಪಸ್ಥಿತರಿದ್ದರು. ಮಹಾಬಲೇಶ್ವರ ಹೆಬ್ಬಾರ್ ಸ್ವಾಗತಿಸಿ ವಂದಿಸಿದರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಕ್ಯುರೇಟರ್ ಕು.ನಯನ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.