Categories: ಕಲ್ಲಡ್ಕ

ಮಹಾಪಾದುಕಾಪೂಜೆ: ಸಮಾಲೋಚನಾ ಸಭೆ

ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಉಪಸ್ಥಿತಿಯಲ್ಲಿ ಏ.9ರಂದು ನಡೆಯಲಿರುವ ಜೀವನದಾನ ಮತ್ತು ಎ.11ರಂದು ನಡೆಯಲಿರುವ ಮಹಾಪಾದುಕಾಪೂಜೆಯ ಅಂಗವಾಗಿ ಸಮಾಲೋಚನೆ ಸಭೆ ಭಾನುವಾರ ನಡೆಯಿತು.

ಜಾಹೀರಾತು

ಆಯೋಜನ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್ ಅಧ್ಯಕ್ಷತೆ ವಹಿಸಿ, ಮಾತನಾಡಿ, ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ 26ನೇ ಸನ್ಯಾಸಗ್ರಹಣ ದಿನಾಚರಣೆ ಅಂಗವಾಗಿ ಕಷ್ಟ ನಷ್ಟಗಳಿಗೆ ಒಳಗಾಗಿ ಬದುಕಿನ ಬೆಳಕು ಕಾಣದ ಕುಟುಂಬಕ್ಕೆ ಸದಾಶ್ರಯ ಜೀವನದಾನ ಮತ್ತು 26ನೇ ಯೋಗಪಟ್ಟಾಭಿಷೇಕ ದಿನಾಚರಣೆ ಅಂಗವಾಗಿ ಸಹಸ್ರ ಸಹಸ್ರ ಶಿಷ್ಯ ಭಕ್ತರಿಂದ ಮಹಾಪಾದುಕಾಪೂಜೆ ನೆರವೇರಲಿದೆ. ಎ.11ರಂದು ನಡೆಯುವ ಮಹಾಪಾದುಕಾ ಪೂಜೆಯಲ್ಲಿ ಸುಮಾರು ೫೦೦೦ಕ್ಕೂ ಅಽಕ ಅಽಕ ಶಿಷ್ಯಭಕ್ತರು ಪಾದುಕಾ ಪೂಜೆ ನೆರವೇರಿಸಲಿದ್ದಾರೆ. ಈಗಾಗಲೇ 4 ಸಾವಿರ ಮಂದಿ ಹೆಸರು ನೋಂದಾಯಿಸಿದ್ದಾರೆ ಎಂದು ಹೇಳಿದರು.

ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಾಪ್ಪು ಅವರು ವಿವಿಧ ಉಪಸಮಿತಿಗಳ ಜವಾಬ್ದಾರಿ ಮತ್ತು ಪ್ರಗತಿ ಕಾರ್ಯವನ್ನು ವಿಮರ್ಶಿಸಿದರು. ಆಯೋಜನ ಸಮಿತಿ ಕಾರ್ಯದರ್ಶಿ ಸೇರಾಜೆ ಸುಬ್ರಹ್ಮಣ್ಯ ಭಟ್, ಉಪಾಧ್ಯಕ್ಷ ಪ್ರೊ.ಟಿ.ಶ್ರೀಕೃಷ್ಣ ಭಟ್, ಉಪಾಧ್ಯಕ್ಷ ಅಶೋಕ್ ಕೆದ್ಲ, ಉಪಾಧ್ಯಕ್ಷ ಉದಯ ಕುಮಾರ್ ಖಂಡಿಗ, ಕೋಶಾಽಕಾರಿ ಬಂಗಾರಡ್ಕ ಜನಾರ್ದನ ಭಟ್, ಧರ್ಮ ಕರ್ಮ ವಿಭಾಗದ ಸಹಕಾರ್ಯದರ್ಶಿ ಕೇಶವಪ್ರಸಾದ ಕೂಟೇಲು, ಸತ್ಯನಾರಾಯಣ ಮೊಗ್ರ, ಮಹೇಶ್ ಚಟ್ನಳ್ಳಿ, ಶ್ರೀನಾಥ್ ಸಾರಂಗ, ಭಾಸ್ಕರ ಹೆಗ್ಡೆ ಕೊಡಗಿಬಲು, ಮಂಗಳೂರು ಹೋಬಳಿಯ ಮೂರು ಮಂಡಲಗಳ ಪದಾಧಿಕಾರಿಗಳು, ಕಾರ್ಯಾಲಯ ಕಾರ್ಯದರ್ಶಿ ಶಿವಪ್ರಸಾದ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ