Categories: ಬಂಟ್ವಾಳ

ರೋಟರಾಕ್ಸ್ ಸನ್ನದು ಪ್ರದಾನ, ಕೌಶಲಾಭಿವೃದ್ಧಿ ತರಬೇತಿ

ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯನ್ನು ಕಾಯ್ದಕೊಳ್ಳಲು ಕೌಶಲ ಕೇಂದ್ರಿತ ಶಿಕ್ಷಣವು ಇವತ್ತಿನ ಅಗತ್ಯವಾಗಿದೆ. ಬೌದ್ದಿಕ ಚಟುವಟಿಕೆಯಾದ ಪಠ್ಯ ಕೇಂದ್ರಿತ ಶಿಕ್ಷಣದ ಜೊತೆಯಲ್ಲಿ ಸ್ವಾಸ್ಥ್ಯ ಮನಸ್ಸುಗಳನ್ನು ನಿರ್ಮಾಣಮಾಡಬಲ್ಲ ಕೌಶಲ ಕೇಂದ್ರಿತ ಶಿಕ್ಷಣವು ವರ್ತಮಾನದ ತುರ್ತಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಸದಸ್ಯ ಗೋಪಾಲ್ ಅಂಚನ್ ಅಭಿಪ್ರಾಯಪಟ್ಟರು.

ಜಾಹೀರಾತು

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ರೋಟರಾಕ್ಸ್ ಸನ್ನದು ಪ್ರದಾನ ಸಮಾರಂಭ ಹಾಗೂ ಅರ್ಥಶ್ರಾಸ್ತ್ರ ವಿಭಾಗದ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಕೌಶಲಾಭಿವೃಧ್ಧಿ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ವರ್ತಮಾನದ ಮಾನವನ ಬದುಕು ಬಹುಮುಖವಾಗಿ ವಿಸ್ತರಣೆಗೊಳ್ಳತ್ತಿದೆ. ವೈಜ್ಞಾನಿಕತೆ ಬೆಳೆದಂತೆ ಮನುಷ್ಯ ತನ್ನ ಬದುಕಿನ ರೀತಿಯನ್ನು ಬಹುಮುಖಿಯಾಗಿ ವಿನ್ಯಾಸಗೊಳಿಸುತ್ತಾನೆ. ಸ್ಪರ್ಧಾತ್ಮಕ ಯುಗದಲ್ಲಿ ಬದುಕುತ್ತಿರುವ ಮಾನವನು ಕೌಶಲ ಕೇಂದ್ರಿತವಾಗಿ ಮುನ್ನಡೆಯುತ್ತಿದ್ದಾನೆ. ವಿದ್ಯಾರ್ಥಿಗಳು ತಮ್ಮ ಕಲಿಕೆಯ ಹಂತದಲ್ಲೇ ಬದುಕಿಗೆ ಪೂರಕವಾದ ಕೌಶಲಗಳನ್ನು ರೂಧಿಸಿಕೊಳ್ಳವುದು ಅಗತ್ಯ ಎಂದವರು ಹೇಳಿದರು.

ಮುಖ್ಯ ಅತಿಥಿಯಾಗಿ ರೋಟರಿಕ್ಲಬ್‌ನ ವಲಯ ನಾಲ್ಕರ ವಲಯ ಕಾರ್ಯದರ್ಶಿಯಾಗಿರುವ ನಾರಾಯಣ ಹೆಗ್ಡೆ ರೋಟರಿ ಕ್ಲಬ್‌ನ ಸ್ವರೂಪ ಕಾರ್ಯದ ಬಗ್ಗೆ ಮಾಹಿತಿ ನೀಡಿದರು.

ರೋಟರಿ ಕ್ಲಬ್ ಬಂಟ್ವಾಳ ಟೌನ್‌ನ ಅಧ್ಯಕ್ಷ ಉಮೇಶ್ ನಿರ್ಮಲ್ ಎಸ್ ವಿ ಎಸ್ ಕಾಲೇಜು ರೋಟರಾಕ್ಸ ಕ್ಲಬ್‌ನ ನೂತನ ಅಧ್ಯಕ್ಷ ವಿದ್ಯಾರ್ಥಿ ಕಾರ್ತಿಕ್‌ಗೆ ಸನ್ನದು ಪ್ರದಾನ ಮಾಡಿದರು ಎಸ್.ವಿ.ಎಸ್ ಕಾಲೇಜಿನ ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸೂಕ್ತ ತರಬೇತಿ ಮೂಲಕ ಪರಿಪೂರ್ಣ ವ್ಯಕ್ತಿತ್ವ ರೂಪುಗಳ್ಳುತ್ತದೆ ಎಂದರು.

ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಸಕೀನಾ ನಾಝಿರ್ ಸ್ವಾಗತಿಸಿದರು. ವಿದ್ಯಾರ್ಥಿ ಭರತ್ ಪ್ರಾರ್ಥಿಸಿದರು. ರೋಟರಾಕ್ಸ್ ಕ್ಲಬ್‌ನ ಸಂಯೋಜಕ ಚೇತನ್ ಮುಂಡಾಜೆ ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿನಿ ಪ್ರಜ್ಞಾ ಪಿ ನಾಯಕ್ ಕಾರ್ಯಕ್ರಮ ನಿರೂಪಿಸಿದರು.


ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಮೂರನೇ ವರ್ಷದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಂಟ್ವಾಳ ತಾಲೂಕಿನ ಸುದ್ದಿಗಳನ್ನು ಒದಗಿಸುವ ಮೊದಲನೇ ವೆಬ್ ಪತ್ರಿಕೆ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

3 hours ago