ಗುರುಛಾಯೆ, ಗುರುತತ್ವದಡಿ ಶಾಂತಿ, ಸಮಾಧಾನ: ರಾಘವೇಶ್ವರ ಶ್ರೀಗಳು

ಗುರು ಛಾಯೆಯಲ್ಲಿ, ಗುರುತತ್ವದ ಆಸರೆಯಲ್ಲಿ ಶಾಂತಿ ಸಮಾಧಾನ ಸದಾ ಇರಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು.

ಜಾಹೀರಾತು

ಮಂಗಳವಾರ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರಮಠದಲ್ಲಿ 26ನೇ ಸನ್ಯಾಸಗ್ರಹಣ ದಿನಾಚರಣೆ ಅಂಗವಾಗಿ ನಡೆದ ಜೀವನದಾನ ಕಾರ್ಯಕ್ರಮದ ಧರ್ಮ ಸಭೆಯಲ್ಲಿ ಆಶೀರ್ವಚನ ನೀಡಿದರು.

ಗುರುವಿನ ಕೃಪೆಯ ಮಳೆ ಇದ್ದಾಗ ಬದುಕು ತಂಪಾಗಿರುತ್ತದೆ. ಗುರು ಇರುವವರ ಬದುಕು ತಂಪಿನಿಂದ ಕೂಡಿದ್ದರೆ, ಗುರು ಇಲ್ಲದರವರ ಬದುಕಿನಲ್ಲಿ ತಾಪ ಮಾತ್ರ ಇರುತ್ತದೆ. ಬದುಕಿನ ಭಾರಗಳನ್ನು, ಬಂಧನಗಳನ್ನು ಕಳೆದುಕೊಳ್ಳುವಂತಹದ್ದು ಸನ್ಯಾಸ. ಶಿಷ್ಯ ಭಕ್ತರ ಅಪೇಕ್ಷೆಯಂತೆ ಕುಟುಂಬದ ದೀಪವನ್ನು ಹಚ್ಚಿ ಸನ್ಯಾಸ ಸ್ವೀಕಾರ ದಿನವನ್ನು ಆಚರಿಸುವ ಜತೆಗೆ ಅಭಯವನ್ನು ನೀಡಲಾಗುತ್ತಿದೆ. ಅಗತ್ಯವಿಲ್ಲದ್ದು ನಮ್ಮಲ್ಲಿ ಸೇರಿಕೊಂಡಾಗ ಕಷ್ಟಕೊಡದೆ ಇರುವುದಿಲ್ಲ. ಅದನ್ನು ಕಳೆದುಕೊಂಡಾಗ ಹಗುರವಾಗತ್ತದೆ. ಬೆಳಕು ನೀಡುವ ಸಂಗತಿಯನ್ನು ಎತ್ತರದಲ್ಲಿ ಇಟ್ಟಾಗ ಎಲ್ಲಾ ಕಡೆಗೆ ಪಸರಿಸಿ ಹೆಚ್ಚು ಜನರಿಗೆ ಸಿಗಲು ಸಾಧ್ಯ ಎಂದು ತಿಳಿಸಿದರು.

ಶ್ರೀ ಮಠದ ಜೀವನದಾನ ಟ್ರಸ್ಟ್ ಮೂಲಕ ಬದುಕು ನಡೆಸಲಸಾಧ್ಯದ ಬಡ ಕುಟುಂಬದ ಜವಾಬ್ದಾರಿಯನ್ನು ನೋಡಿಕೊಳ್ಳುವ ಕಾರ್ಯಕ್ರಮದ ಅಂಗವಾಗಿ ಹೊನ್ನಾವರದ ಕಡ್ಲೆಯ ಗೋವಿಂದ ಹೆಗಡೆ ಅವರ ಕುಟುಂಬಕ್ಕೆ ಜೀವನದಾನ ನೀಡಲಾಯಿತು.

ಜಾಹೀರಾತು

ಮಹಾಪಾದುಕೆ ನಿರ್ಮಾಣ ಮಾಡಿದ ಶಿಲ್ಪಿ ಸದಾಶಿವ ಗುಡಿಯಾರ್, ಕೆಲಸದ ಉಸ್ತುವಾರಿ ನೋಡಿಕೊಂಡ ಮುರಳಿಕೃಷ್ಣ ಮಾನಸವನ ಅವರನ್ನು ಗೌರವಿಸಲಾಯಿತು.

ಪದ್ಮಭೂಷಣ ಡಾ.ಗಿರೀಶ ಭಾರದ್ವಾಜ, ಶ್ರೀ ಮಠದ ಕಾರ್ಯನಿರ್ವಾಹಕ ಅಧಿಕಾರಿ ಕೆ. ಜಿ. ಭಟ್, ಹವ್ಯಕ ಮಹಾಮಂಡಲ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಾಪ್ಪು, ಜೀವನದಾನ ಮತ್ತು ಯೋಗಪಟ್ಟಾಭಿಷೇಕ ದಿನ ಆಯೋಜನ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್, ಆಯೋಜನ ಸಮಿತಿ ಪ್ರಧಾನ ಕಾರ್ಯದರ್ಶಿ ಸೇರಾಜೆ ಸುಬ್ರಹ್ಮಣ್ಯ ಭಟ್, ಕೋಶಾಧಿಕಾರಿ ಬಂಗಾರಡ್ಕ ಜನಾರ್ದನ ಭಟ್, ಗಣೇಶ್ ಭಟ್ ಮೈಕೆ ಮತ್ತು ಮಠದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮುಳ್ಳೇರಿಯ ಮಂಡಲ ಕೋಶಾಧಿಕಾರಿ ಸುಬ್ರಹ್ಮಣ್ಯ ಭಟ್ ಗಬ್ಬಲಡ್ಕ, ಯು. ಎಸ್. ವಿಶ್ವೇಶ್ವರ ಭಟ್ ಕಾರ್ಯಕ್ರಮ ನಿರೂಪಿಸಿದರು.

ಮಹಾ ಪಾದುಕೆ ಪ್ರತಿಷ್ಠೆ:

ಜಾಹೀರಾತು

ಮಾಣಿಮಠದ ಆವರಣದಲ್ಲಿ ಸ್ಥಾಪನೆಯಾಗಲಿರುವ ಶಿಲಾಮಯವಾದ ಶಂಕರರ ಮಹಾಪಾದುಕೆಯನ್ನು ವೇಣೂರು, ಗುರುವಾಯನಕೆರೆ, ಉಪ್ಪಿನಂಗಡಿ, ಪುತ್ತೂರು ಮಾರ್ಗವಾಗಿ ಭವ್ಯ ಶೋಭಾಯಾತ್ರೆ ಮೂಲಕ ಪೆರಾಜೆ ಮಠಕ್ಕೆ ಸೋಮವಾರ ಸಂಜೆ ತರಲಾಯಿತು. ಮಂಗಳವಾರ ಮಧ್ಯಾಹ್ನ ೧೨ ಗಂಟೆಗೆ ಮಾಣಿಮಠದಲ್ಲಿ ಮಹಾಪಾದುಕೆ ಸ್ಥಾಪನೆ ಧಾರ್ಮಿಕ ವಿಧಿವಿಧಾನದ ಮೂಲಕ ನಡೆಯಿತು.

ಯಕ್ಷಗಾನ: ಪಾದುಕಾ ಪ್ರದಾನ ಯಕ್ಷಗಾನ ತಾಳಮದ್ದಳೆ ನಡೆಯಿತು. ಕಲಾವಿದರಾಗಿ ಕುರಿಯ ಗಣಪತಿ ಶಾಸ್ತ್ರಿ, ಉಮಾಕಾಂತ ಭಟ್ ಮೇಲುಕೋಟೆ, ಮೋಹನ ಭಾಸ್ಕರ ಹೆಗಡೆ, ಅಂಬಾಪ್ರಸಾದ ಪಾತಾಳ ಮತ್ತಿತರರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗುರುಛಾಯೆ, ಗುರುತತ್ವದಡಿ ಶಾಂತಿ, ಸಮಾಧಾನ: ರಾಘವೇಶ್ವರ ಶ್ರೀಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*