Categories: ಬಂಟ್ವಾಳ

ಮೋದಿ ಯುವಜನತೆಯ ಐಕಾನ್: ಸುನೀಲ್ ಕುಮಾರ್

ಪ್ರದಾನಿ ನರೇಂದ್ರಮೋದಿ ಒರ್ವವ್ಯಕ್ತಿಯಲ್ಲ,ಭವಿಷ್ಯದ ನವಭಾರತ ನಿರ್ಮಾಣದ ಶಕ್ತಿ, ಅವರು ಯುವಜನತೆಯ ಐಕಾನ್ ಎಂದು ದ.ಕ.ಜಿಲ್ಲಾ ಬಿಜೆಪಿ ಚುನಾವಣಾ ಉಸ್ತುವಾರಿ ,ಶಾಸಕ ಸುನೀಲ್ ಕುಮಾರ್ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ್ದಾರೆ.

ಜಾಹೀರಾತು

ಮಂಗಳವಾರ ಸಂಜೆ ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರಿಗಿಂತ ವಯಸ್ಸಿನಲ್ಲಿ ಮೋದಿ ಹಿರಿಯರು, ಆದರೆ ನರೇಂದ್ರ ಮೋದಿಯವರು ಯುವಜನತೆಯ ಐಕಾನ್ ಆಗಿದ್ದಾರೆ ಎಂದು ಹೇಳಿದರು.

ದ.ಕ.ಜಿಲ್ಲೆಯಲ್ಲಿ ಮೂರು ಹಂತದ ಮನೆ,ಮನೆ ಭೇಟಿ ನೀಡಿ ಪ್ರಚಾರಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ. ಲೋಕಸಭಾ ಕ್ಷೇತ್ರದ 1861 ಬೂತ್ ಗಳಲ್ಲಿಯೂ ಮೊದಲ ಹಂತದ ಪ್ರಚಾರಕಾರ್ಯ ಮುಗಿದಿದ್ದು,ಎ.10 ರಿಂದ ಎರಡನೇ ಹಂತದ ಮನೆ,ಮನೆ ಪ್ರಚಾರ ಕಾರ್ಯ ಆರಂಭವಾಗಲಿದೆ ಎಂದು ಸುನೀಲ್ ಕುಮಾರ್ ತಿಳಿಸಿದರು.

ಲಕ್ಷ ಜನ: ಏ.13 ರಂದು ಸಂಜೆ 3.30ಕ್ಕೆ  ಪ್ರದಾನಿ ನರೇಂದ್ರಮೋದಿಯವರು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಭಾಗವಹಿಸುವ ವಿಜಯಸಂಕಲ್ಪ ರಾಲಿಯಲ್ಲಿ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.ಈ ರಾಲಿ ಚುನಾವಣಾ ಪ್ರಚಾರದ ದಿಕ್ಕನ್ನೇ ಬದಲಿಸಲಿದ್ದು,ಬಂಟ್ವಾಳ ಕೇತ್ರದಿಂದಲೂ   ಶಾಸಕ ಯು.ರಾಜೇಶ್ ನಾಯ್ಕ್ ಅವರ ನೇತೃತ್ವದಲ್ಲಿ ಸುಮಾರು 10 ಸಾವಿರಮಂದಿ ಕಾರ್ಯ ಕರ್ತರು ಭಾಗವಹಿಸಲಿದ್ದಾರೆ.ಈ ರಾಲಿಯಲ್ಲಿ 5 ಸಾವಿರಮಂದಿ ಕಾರ್ಯಕರ್ತರಿಗೆ ಚೌಕಿದಾರಪೇಟೆ ಧರಸಲು ಅವಕಾಶ ಕಲ್ಪಿಸಲಾಗಿದೆ.ಭಾಗವಹಿಸುವವರು ಸಂಜೆ 3.30ರ ಒಳಗಾಗಿಮೈದಾನದ ಒಳಗೆ ಪ್ರವೇಶಿಸಬೇಕು ಎಂದು ಸುನೀಲ್ ಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಯು.ರಾಜೇಶ್ ನಾಯ್ಕ್ ,ಸಹ ಪ್ರಭಾರಿ ಪ್ರತಾಪ್ ಸಿಂಹ ನಾಯಕ್,ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ, ಸಂಚಾಲಕ ಗೋಪಾಲಕೃಷ್ಣ ಹೇರಳೆ,ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಬಂಟ್ವಾಳ ಕ್ಷೇತ್ರದ ಪ್ರಭಾರಿ ಅಪ್ಪಯ್ಯ ಮಣಿಯಾಣಿ, ಪ್ರ.ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ,ಮೋನಪ್ಪ ದೇವಸ್ಯ,ಕಾರ್ಯದರ್ಶಿ ರಮಾನಾಥ ರಾಯಿ,ಮಾಜಿ ಪುರಸಭಾಧ್ಯಕ್ಷ ದಿನೇಶ್ ಭಂಡಾರಿ,ಪುರುಷೋತ್ತಮ ಶೆಟ್ಟಿ ವಾಮದಪದವು,ಗಣೇಶ್ ರೈ ಮಾಣಿ ಉಪಸ್ಥಿತರಿದ್ದರು.

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

20 hours ago