Categories: ಬಂಟ್ವಾಳ

ಈ ಬಾರಿ ಬದಲಾವಣೆ ನಿಶ್ಚಿತ, ಕಾಂಗ್ರೆಸ್ ಗೆಲುವು ಖಚಿತ: ಮಿಥುನ್ ರೈ

ಕಾಂಗ್ರೆಸ್ ಪಕ್ಷದ ದಕ್ಷಿಣ ಕನ್ನಡ ಲೋಕಸಭೆ ಅಭ್ಯರ್ಥಿ ಮಿಥುನ್ ರೈ ಗುರುವಾರ ಬಂಟ್ವಾಳ, ಸರಪಾಡಿ, ಕಕ್ಯಪದವು, ಕಕ್ಯೆಬೀಡು,ಕಾವಳಕಟ್ಟೆ,ವಗ್ಗ, ಕಾರಿಂಜಾ,ಪೂಂಜಾ, ಕೆರೆಬಳಿ,ಸಂಗಬೇಟ್ಟು, ಕಲ್ಕುರಿ, ಸಿದ್ದಕಟ್ಟೆ,ಕರೊಪಾಡಿ,ಸಾಲೆತ್ತೂರು, ಕನ್ಯಾನ ಮೊದಲಾದೆಡೆ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ಬಂಟ್ವಾಳ ಬಡ್ಡಕಟ್ಟೆ ಹನುಮಂತ ದೇವಾಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಬಂಟ್ವಾಳ ಪೇಟೆಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ಮೂಲಕ ಮತಯಾಚನೆ ನಡೆಸಿದರು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಅವರು, ಈ ಬಾರಿ ಬದಲಾವಣೆ ನಿಶ್ಚಿತ, ಕಾಂಗ್ರೆಸ್ ಗೆಲುವು ಖಚಿತ ಯುವಕರು ಒಗ್ಗಟ್ಟಿನಿಂದ ವಿಶ್ರಾಂತಿ ಪಡೆಯದೆ ಕೆಲಸ ಮಾಡಿ ಎಂದು ಹೇಳಿದರು. ಬದಲಾವಣೆ ಯ ಮಂತ್ರ ಪ್ರತಿಯೊಬ್ಬ ಕಾರ್ಯಕರ್ತನ ಬಾಯಲ್ಲಿಯೂ ಬರಬೇಕಾಗಿದೆ ಎಂದು ಅವರು ಹೇಳಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ ಅಭಿವೃದ್ಧಿ ಗಾಗಿ ಯುವಕ ಮಿಥುನ್ ರೈ ಅವರಿಗೆ ಬೆಂಬಲ ನೀಡಬೇಕು. ದ.ಕ.ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ಪರಿವರ್ತನೆ ಮಾಡಲು ನಿಮ್ಮ ಮತ ಕಾಂಗ್ರೇಸ್ ಗೆ ನೀಡಿ ಎಂದರು.

ಜಾಹೀರಾತು

ಈ ಸಂದರ್ಭ ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಪ್ರಮುಖರಾದ ಮಾಯಿಲಪ್ಪ ಸಾಲ್ಯಾನ್, ಸುದರ್ಶನ ಜೈನ್, ಅಬ್ಬಾಸ್ ಆಲಿ, ವಾಸು ಪೂಜಾರಿ, ಗಂಗಾಧರ ಪೂಜಾರಿ, ಜನಾರ್ದನ ಚೆಂಡ್ತಿಮಾರ್, ಬೇಬಿ ಕುಂದರ್, ಸುದೀಪ್ ಶೆಟ್ಟಿ, ಬಿ.ಎಚ್.ಖಾದರ್, ಚಿತ್ತರಂಜನ್ ಶೆಟ್ಟಿ, ಜೆ.ಡಿ.ಎಸ್ .ಪ್ರಮುಖರಾದ ಬಿ.ಮೋಹನ್, ಹಾರೂನ್ ರಶೀದ್, ಪಿ.ಎ.ರಹೀಂ ಮತ್ತಿತರರು ಹಾಜರಿದ್ದರು

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ