ದೇಶ ಹಾಳಾಗಲು ಕಾಂಗ್ರೆಸ್ ಕಾರಣ ಎನ್ನುವುದೇ ಸುಳ್ಳಿನ ಕಂತೆ: ನಿಕೇತ್ ರಾಜ್ ಮೌರ್ಯ

ಜಾಹೀರಾತು

ದೇಶ ಹಾಳಾಗಲು 60 ವರ್ಷಗಳ ಕಾಂಗ್ರೆಸ್ ಆಡಳಿತ ಕಾರಣ ಎಂದು ಬಿಜೆಪಿ ಮತ್ತದರ ಬೆಂಬಲಿಗರು ಹೇಳುತ್ತಾ ಬಂದಿರುವುದೇ ಸುಳ್ಳಿನ ಕಂತೆ. ಅಸಲಿಗೆ ಕಾಂಗ್ರೆಸ್ ಅವಧಿಯಲ್ಲಿ ಸಾಕ್ಷರತೆ, ಬಡ ಜನರಿಗೆ ಅನ್ನಭಾಗ್ಯ, ಬೆಳಕು, ಮನೆಗಳು ದೊರಕಿದವು. ದೊಡ್ಡ ಯೋಜನೆಗಳು ಬಂದವು. ಹಗರಣಗಳ ಬಗ್ಗೆ ಮಾತನಾಡುವ ನರೇಂದ್ರ ಮೋದಿ ನೇತೃತ್ವದ ಸರಕಾರದಿಂದ ಜನರು ಕೇವಲ ಭಾಷಣಗಳನ್ನಷ್ಟೇ ಕೇಳಬೇಕಾಯಿತು ಎಂದು ಬಿ.ಸಿ.ರೋಡಿನ ಪೊಳಲಿ ದ್ವಾರದ ಬಳಿ ಇರುವ ಮೈದಾನದಲ್ಲಿ ಗುರುವಾರ ಸಂಜೆ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಷಣಕಾರ ನಿಕೇತ್ ರಾಜ್ ಮೌರ್ಯ ಹೇಳಿದರು.

ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಪರ ಪ್ರಚಾರ ಭಾಷಣ ಮಾಡಿದ ಅವರು, ಧರ್ಮನಿರಪೇಕ್ಷ ತತ್ವಗಳನ್ನು ಆಚರಿಸುವ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದು ಹೇಳಿದರು.

ಜಾಹೀರಾತು

ಇದಕ್ಕೂ ಮುನ್ನ ಮಾತನಾಡಿದ ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ, ಬಿಜೆಪಿಯಿಂದ ಆಯ್ಕೆಗೊಂಡ ಸಂಸದರು ಶೂನ್ಯ ಸಾಧನೆ ಮಾಡಿದ್ದಾರೆ, ಅಪಪ್ರಚಾರ ಮಾಡಿದರೆ ಗೆಲ್ಲುತ್ತೇವೆ ಎಂದು ನಂಬಿದ್ದಾರೆ ಎಂದು ಲೇವಡಿ ಮಾಡಿದರು.

ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಅಪಪ್ರಚಾರದಿಂದ ತಾನು ವಿಧಾನಸಭೆಯಲ್ಲಿ ಸೋಲನುಭವಿಸಬೇಕಾಯಿತು. ಜನಪರ ಕೆಲಸ ಮಾಡಿದ ತೃಪ್ತಿ ತನಗಿದೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ಸಂಸದರಿಂದ ಅಭಿವೃದ್ಧಿಗಳಾಗಿವೆ. ಬಿಜೆಪಿಯಿಂದ ಆಯ್ಕೆಗೊಂಡ ಸಂಸದರ ಯಾವುದಾದರೂ ಒಂದು ಸಾಧನೆಯನ್ನು ಹೇಳುವಿರಾ ಎಂದು ಪ್ರಶ್ನಿಸಿದರು.

ಜಾಹೀರಾತು

ಪಕ್ಷದ ಅಭ್ಯರ್ಥಿ ಮಿಥುನ್ ರೈ ಮಾತನಾಡಿ, ತಾನು ಕೇಸರಿ ಶಾಲು ಹಾಕುವ ಬಗ್ಗೆ ಕೆಲವರು ಪ್ರಸ್ತಾಪಿಸುತ್ತಾರೆ. ಆದರೆ ಕೇಸರಿ ಎಲ್ಲರನ್ನೂ ಒಗ್ಗೂಡಿಸುವ ಸಂಕೇತ, ಹಿಂದು, ಮುಸ್ಲಿಂ, ಕ್ರೈಸ್ತರನ್ನು ಜೊತೆಗೂಡಿಸಿ ಕೆಲಸ ಮಾಡುತ್ತೇನೆ, ತನಗೆ ಅವಕಾಶ ನೀಡಿದರೆ ನಿಷ್ಠೆಯಿಂದ ಕೆಲಸ ಮಾಡುವೆ ಎಂಬ ಆಶ್ವಾಸನೆ ನೀಡಿದರು.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮಾತನಾಡಿ, ಈ ಬಾರಿ ಮಿಥುನ್ ರೈ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದರು.

ಈ ಸಂದರ್ಭ ವಿಧಾನಪರಿಷತ್ತು ಸದಸ್ಯ ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಶಾಹುಲ್ ಹಮೀದ್, ಪಕ್ಷ ಪ್ರಮುಖರಾದ ಬಿ.ಎಚ್. ಖಾದರ್, ಕೋಡಿಜಾಲ್ ಇಬ್ರಾಹಿಂ, ಜೆಡಿಎಸ್ ಪ್ರಮುಖರಾದ ಮಹಮ್ಮದ್ ಶಫಿ, ಪಿ.ಎ.ರಹೀಂ, ಹಾರೂನ್ ರಶೀದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಶೆಟ್ಟಿ ಮಾಣಿ, ಪ್ರಮುಖರಾದ ಬಾಲಕೃಷ್ಣ ಆಳ್ವ ಕೊಡಾಜೆ, ಸದಾಶಿವ ಬಂಗೇರ, ಪ್ರಶಾಂತ್ ಕುಲಾಲ್, ರಾಜಶೇಖರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದೇಶ ಹಾಳಾಗಲು ಕಾಂಗ್ರೆಸ್ ಕಾರಣ ಎನ್ನುವುದೇ ಸುಳ್ಳಿನ ಕಂತೆ: ನಿಕೇತ್ ರಾಜ್ ಮೌರ್ಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*