ಲೋಕಸಭಾ ಚುನಾವಣೆಯ ಪ್ರಚಾರದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಇಂದು ಮಧ್ಯಾಹ್ನ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎ.13ರಂದು ನಗರದಲ್ಲಿ ವಾಹನ ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.
ಎ.13ರಂದು ಬೆಳಗ್ಗೆ 8ರಿಂದ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ನಿರ್ಗಮಿಸುವ ವರೆಗೆ ಬಜ್ಪೆ ವಿಮಾನ ನಿಲ್ದಾಣದಿಂದ ನಗರದ ನೆಹರೂ ಮೈದಾನದ ವರೆಗೆ ರಸ್ತೆಯ ಎರಡೂ ಕಡೆಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
ಪ್ರಧಾನಿ ಕಾರ್ಯಕ್ರಮಕ್ಕೆ ಆಗಮಿಸುವವರ ವಾಹನಗಳಿಗೆ ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಲಾಗಿದೆ.
ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ ನಗರದಲ್ಲಿ 5 ಎಸ್ಪಿ/ಡಿಸಿಪಿ, 10 ಡಿವೈಎಸ್ಪಿ/ಎಸಿಪಿ, 36 ಪಿಐಗಳು, 67 ಪಿಎಸ್ಐ, 147 ಎಎಸ್ಐ, 1207 ಎಚ್ಸಿ/ಪಿಸಿ ಸಹಿತ ಒಟ್ಟು 1,472 ಪೊಲೀಸ್ ಅಧಿಕಾರಿಗಳು ಮತ್ತು ಸಿಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. 92 ಎಚ್ಐ, 5 ಕೆಎಸ್ಆರ್ಪಿ ತುಕಡಿ, 19 ಸಿಎಆರ್ ತುಕಡಿ ಹಾಗೂ 2 ಸಿಆರ್ಪಿಎಫ್ ತುಕಡಿಗಳ ಅಧಿಕಾರಿ ಮತ್ತು ಸಿಬಂದಿಗಳನ್ನು ನೇಮಿಸಲಾಗಿದೆ. ಜತೆಗೆ, 4 ಎಎಸ್ಸಿ ತಂಡ, 1 ಬಿಡಿಎಸ್ ತಂಡ, 30 ಡಿಎಫ್ಎಂಡಿ/ 30 ಎಚ್ಎಚ್ಎಂಡಿಯನ್ನು ಕಾರ್ಯಕ್ರಮ ನಡೆಯುವ ಸ್ಥಳ, ವಿಮಾನ ನಿಲ್ದಾಣ ಹಾಗೂ ವಿವಿಐಪಿ ಸಂಚರಿಸುವ ಸ್ಥಳದ ತಪಾಸಣೆಗೆ ನೇಮಿಸಲಾಗಿದೆ. ನಗರದ ಬಂದೋಬಸ್ತು ಕರ್ತವ್ಯದಲ್ಲಿ ಒಟ್ಟು 34 ಸೆಕ್ಟರ್ ಮೊಬೈಲ್ಗಳು ಹಾಗೂ 144 ಸೂಕ್ಷ್ಮ ಪ್ರದೇಶಗಳಲ್ಲಿ ಪಿಕೆಟಿಂಗ್ ಪಾಯಿಂಟ್ಗಳು ಕಾರ್ಯ ನಿರ್ವಹಿಸಲಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…