Categories: ಬಂಟ್ವಾಳ

ದಡ್ಡಲಕಾಡು ಶಾಲೆಯಲ್ಲಿ ಅಂಬೇಡ್ಕರ್ ಜನ್ಮದಿನಾಚರಣೆ

ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆಯನ್ನು ದಡ್ಡಲಕಾಡು ಸರಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಏ.14ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಾಹೀರಾತು

ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ ದೀಪಪ್ರಜ್ವಲಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ಶಿಕ್ಷಣ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಸುಕುಮಾರ್ ಹಾಗೂ ಸಿಆರ್‌ಪಿ ಚಿನ್ನಸ್ವಾಮಿ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿದರು.

ಶಾಲಾ ಸಹಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರ ಜನನ, ಬಾಲ್ಯದ ದಿನಗಳು, ಶಿಕ್ಷಣ, ಜೀವನ ಸಾಧನೆಗಳು, ತತ್ವ ಸಿದ್ದಾಂತಗಳ ಬಗ್ಗೆ ಮಾಹಿತಿ ನೀಡಿದರು. ಶಾಲಾ ದತ್ತು ಸ್ವೀಕಾರ ಸಂಸ್ಥೆ ಶ್ರೀದುರ್ಗಾ ಫ್ರೆಂಡ್ಸ್ ಕ್ಲಬ್‌ನ ಕಾರ್ಯದರ್ಶಿ ನವೀನ್ ಎಸ್. ಸೇಸಗುರಿ ವೇದಿಕೆಯಲ್ಲಿದ್ದರು. ಶಾಲಾ ಮುಖ್ಯ ಶಿಕ್ಷಕ ಮೌರೀಸ್ ಡಿಸೋಜಾ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು. ಶಿಕ್ಷಕಿಯರಾದ ಅನಿತಾ ವಂದಿಸಿದರು. ಉಮಾವತಿ ಕಾರ್ಯಕ್ರಮ ನಿರೂಪಿಸಿದರು. ಎಸ್ ಡಿಎಂಸಿ ಸದಸ್ಯರು, ಶಿಕ್ಷಕ ವೃಂದದವರು, ಅಕ್ಷರ ದಾಸೋಹ ಸಿಬ್ಬಂದಿಗಳು ಹಾಜರಿದ್ದರು. ಬಳಿಕ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.

ಡಾ. ಅಂಬೇಡ್ಕರ್ ಜೀವನ ಪಾಠ:

ಡಾ. ಅಂಬೇಡ್ಕರ್ ಅವರ ಸಾಧನೆ ಹಾಗೂ ತತ್ವಾದರ್ಶಗಳ ಬಗ್ಗೆ ಶನಿವಾರ ಶಾಲೆಯಲ್ಲಿ ಪಾಠದ ಮೂಲಕ ಮುಖ್ಯ ಶಿಕ್ಷಕ ಮೌರೀಸ್ ಡಿಸೋಜಾ ವಿದ್ಯಾರ್ಥಿಗಳಿಗೆ ಸವಿವರವಾದ ಮಾಹಿತಿ ನೀಡಿದರು. ರಾಷ್ಟ್ರೀಯ ನಾಯಕರುಗಳ ಜನ್ಮದಿನಾಚರಣೆಯ ಮೊದಲ ದಿನ ಅವರ ಸಾಧನೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ಮರುದಿನ ಶಾಲೆಯಲ್ಲಿ ಅವರ ಭಾವಚಿತ್ರ ಇಟ್ಟು ಜನ್ಮಾದಿನಾಚರಣೆಯನ್ನು ಅರ್ಥಪೂರ್ಣವಾಗಿ ನಡೆಸುವ ಪರಂಪರೆಯನ್ನು ಶಾಲೆಯಲ್ಲಿ ನಡೆಸಿಕೊಂಡು ಬರುತ್ತಿದ್ದೇವೆ. ಎಲ್ಲಾ ಮಹಾನ್ ವ್ಯಕ್ತಿಗಳ, ಸಾಧಕರ ಜೀವನ ಸಾಧನೆಯನ್ನು ವಿದ್ಯಾರ್ಥಿಗಳಿಗೆ ಮೊದಲ ದಿನ ತಿಳಿಸಿ ಬಳಿಕ ಆಚರಿಸುವುದರಿಂದ ವಿದ್ಯಾರ್ಥಿಗಳಿಗೆ ಆ ವ್ಯಕ್ತಿಗಳ ತತ್ವಾದರ್ಶವನ್ನು ತಿಳಿದು ಕೊಳ್ಳಲು ಸಾಧ್ಯವಾಗುತ್ತದೆ. ಈ ರೀತಿ ಜನ್ಮದಿನಾಚರಣೆ ನಡೆಸುವುದು ಹೆಚ್ಚು ಅರ್ಥಪೂರ್ಣವೂ ಆಗಿದೆ ಎಂದು ನಾವು ನಂಬಿದ್ದೇವೆ ಎಂದು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ತಿಳಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts