ಸ್ಟ್ರಾಂಗ್ ರೂಂ ಸೇರಿದ ಮತಪೆಟ್ಟಿಗೆಗಳು

ಮಂಗಳೂರು: ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮತಯಂತ್ರಗಳು ಸುರತ್ಕಲ್‌ನ ಎನ್ ಐ ಟಿಕೆಯ ಇಂಜಿನಿಯರಿಂಗ್ ಕಾಲೇಜಿನ ಕಟ್ಟಡದಲ್ಲಿ ಭದ್ರವಾಗಿವೆ.

ಜಾಹೀರಾತು

ಇಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹಾಗೂ ಚುನಾವಣಾ ವೀಕ್ಷಕರಾದ ರಾಜೀವ್ ರತನ್ ಅವರ ಸಮ್ಮುಖದಲ್ಲಿ ಮತಯಂತ್ರಗಳನ್ನು ಭದ್ರತಾಕೊಠಡಿಯಲ್ಲಿರಿಸಿ ಮುದ್ರೆ ಹಾಕಲಾಯಿತು.

8 ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಅತ್ಯಂತ ಭದ್ರತೆಯಲ್ಲಿ ತಂದಿರಿಸಲಾಗಿದ್ದು, ಕಟ್ಟಡಕ್ಕೆ ವಿಶೇಷ ಭದ್ರತಾ ಪಡೆ, ಪೊಲೀಸ್ ತಂಡ ಹಾಗೂ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ. ಮತಯಂತ್ರಗಳನ್ನು ಸ್ಟ್ರಾಂಗ್ ರೂಂಗೆ ಇರಿಸಿದ ಬಳಿಕ ಜಿಲ್ಲಾಧಿಕಾರಿಗಳು ಎಲ್ಲರಿಗೂ ವಿಶೇಷ ಅಭಿನಂದನೆ ಸಲ್ಲಿಸಿದರು.

ಜಾಹೀರಾತು

ಸಿಇಒ ಡಾ.ಸೆಲ್ಲಮಣಿ, ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ ಇದ್ದರು. ಮತಯಂತ್ರಗಳ ಪರಿಶೀಲನೆ ಮತಯಂತ್ರಗಳ ಪರಿಶೀಲನೆಯನ್ನು ಎನ್‌ಐಟಿಕೆಯಲ್ಲಿಂದು ಜಿಲ್ಲಾ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಅಪರ ಜಿಲ್ಲಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ತಹಸೀಲ್ದಾರರು, ರಾಜಕೀಯ ಪಕ್ಷದ ಪ್ರತಿನಿಧಿಗಳು ಪಾಲ್ಗೊಂಡರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ