Categories: ವಿಟ್ಲ

ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್: ಮೇ 5ರಂದು ಪದಗ್ರಹಣ, ಚುಟುಕು ಕವಿಗೋಷ್ಠಿ

ರಾಜಾರಾಮ ವರ್ಮ ವಿಟ್ಲ

ವಿಟ್ಲ: ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಸಾಹಿತಿ ರಾಜಾರಾಮ ವರ್ಮ ವಿಟ್ಲ, ಗೌರವಾಧ್ಯಕ್ಷರಾಗಿ ಸಾಹಿತಿ ವಿ. ಸುಬ್ರಹ್ಮಣ್ಯ ಭಟ್ ತುಂಬೆ ಹಾಗೂ ಕಾರ್ಯದರ್ಶಿಯಾಗಿ ಸುರೇಖಾ ಎಳವಾರ್ ಆಯ್ಕೆಯಾಗಿದ್ದಾರೆ.

ವಿ. ಸುಬ್ರಹ್ಮಣ್ಯ ಭಟ್

ಸದಸ್ಯರಾಗಿ ಮಹೇಶ್‌ ನೆಟ್ಲ, ಜ್ಯೋತಿ ರವಿರಾಜ್ ಹಾಗೂ ಸೀತಾಲಕ್ಷ್ಮೀ ವರ್ಮ ವಿಟ್ಲ ನೇಮಕವಾಗಿದ್ದು, ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಚುಟುಕು ಕವಿಗೋಷ್ಠಿ ಕಾರ್ಯಕ್ರಮವು ಮೇ 5ರಂದು ವಿಟ್ಲದ ವಿಠಲ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ.

ಜಾಹೀರಾತು

ಸುರೇಖಾ ಎಳವಾರ್

ಪೂರ್ವಾಹ್ನ 10ಕ್ಕೆ ನಡೆಯುವ ಪದಗ್ರಹಣ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ ಉದ್ಘಾಟಿಸುವರು. ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ, ವಿಶ್ರಾಂತ ಯೋಧ ಮತ್ತು ಚಲನಚಿತ್ರ ನಟ ತಾರಾನಾಥ ಬೋಳಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಕಾರ್ಯದರ್ಶಿ ಹರೀಶ್ ಸುಲಾಯ ಒಡ್ಡಂಬೆಟ್ಟು ಉಪಸ್ಥಿತರಿರುವರು. ಬಳಿಕ ಸಾಹಿತಿ ಶಿವಕುಮಾರ ಸಾಯ ಅವರ ಅಧ್ಯಕ್ಷತೆಯಲ್ಲಿ ಚುಟುಕು ಕವಿಗೋಷ್ಠಿ ನಡೆಯಲಿದೆ ಎಂದು ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ