ಇಸ್ಪೀಟ್ ಚಟಕ್ಕೆ ತನ್ನದೇ ಮನೆಯಿಂದ ನಗ,ನಗದು ಕಳವು

ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮದ ಗಂಪದಡ್ಡ ಎಂಬಲ್ಲಿ  ವ್ಯಕ್ತಿಯೊಬ್ಬ ಇಸ್ಪೀಟ್ ಚಟಕ್ಕಾಗಿ ತನ್ನದೇ ಮನೆಯ  ನಗ, ನಗದು  ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸರು ಆರೋಪಿಯನ್ನು ಬಂಧಿಸಿ, ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಜಾಹೀರಾತು

ಗಂಪದಡ್ಡ ನಿವಾಸಿ ಸಾಧಿಕ್ ಬಂಧಿತ ಆರೋಪಿ. ಈತನಿಂದ ಪೊಲೀಸರು 62 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡಿರುತ್ತಾರೆ. ಇದರ  ಒಟ್ಟು ಮೌಲ್ಯ ಒಂದು ಲಕ್ಷದ ಎಂಭತ್ತೆರಡು ಸಾವಿರ ರೂಪಾಯಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯ ಹಿಂಬಾಗಿಲನ್ನು ಒಡೆದು ಮನೆಯೊಳಗೆ ಪ್ರವೇಶಿಸಿ ಮನೆಯೊಳಗಿನ ಕಬ್ಬಿಣದ ಬೀರುವನ್ನು ಹರಿತ ಆಯುಧದಿಂದ ಮೀಟಿ ಬೀರುವಿನೊಳಗಿದ್ದ ಚಿನ್ನದ ಒಡವೆಗಳು ಹಾಗೂ ನಗದು ಹಣವನ್ನು ಕಳವುಗೈಯಲಾಗಿತ್ತು. ಈತ ಇಸ್ಪೀಟ್ ಆಟದ ಚಟಕ್ಕೆ ಹಣಕಾಸು ಹೊಂದಿಸಲು ಈ ಕಳವು ಕೃತ್ಯ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ