Categories: ಕಲ್ಲಡ್ಕ

ಕೊಲಂಬೋ ದಾಳಿಗೆ ಕಲ್ಲಡ್ಕದಲ್ಲಿ ಶ್ರದ್ಧಾಂಜಲಿ, ಜನಜಾಗೃತಿ ಸಭೆ

ಕೊಲಂಬೋದಲ್ಲಿ ನಡೆದ ಉಗ್ರರ ದಾಳಿಯನ್ನು ವಿರೋಧಿಸಿ ಹಾಗೂ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಹಿಂದು ಜಾಗರಣಾ ವೇದಿಕೆ ವಿಟ್ಲ ತಾಲೂಕು ವತಿಯಿಂದ ಕಲ್ಲಡ್ಕದ ಶ್ರೀರಾಮ ಮಂದಿರದ ಬಳಿ ಜನಜಾಗೃತಿ ಸಭೆ ಗುರುವಾರ ಸಂಜೆ ನಡೆಯಿತು.

ಜಾಹೀರಾತು

ರಾಷ್ಟ್ರ ಸೇವಿಕಾ ಸಮಿತಿ ಪ್ರಾಂತ ಪ್ರಮುಖರಾದ ಡಾ. ಕಮಲಾ ಪ್ರಭಾಕರ್ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾ ಭಾರತೀಯ ಪ್ರಾಂತ ಪ್ರಮುಖರಾದ ವಸಂತ ಮಾಧವ ನುಡಿನಮನ ಸಲ್ಲಿಸಿದರು.

ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಕಾರ್ಯದರ್ಶಿಗಳಾದ ರಾಧಾಕೃಷ್ಣ ಅಢ್ಯಂತಾಯ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾರೀರಿಕ ಪ್ರಮುಖರಾದ ಮಹಾಬಲ ಕಲ್ಲಡ್ಕ, ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ಕಲ್ಲಡ್ಕ, ಶ್ರೀರಾಮ ಮಂದಿರ ಕಲ್ಲಡ್ಕದ ಟ್ರಸ್ಟ್ ನ ಕಾರ್ಯದರ್ಶಿಗಳಾದ ನಾಗೇಶ ಕಲ್ಲಡ್ಕ, ಬಿಜೆಪಿ ನಾಯಕಿ ಸುಲೋಚನ ಭಟ್, ತಾಲೂಕು ಪಂಚಾಯತ್ ಸದಸ್ಯರಾದ ಲಕ್ಷ್ಮಿ ಗೋಪಾಲ್ ಆಚಾರ್ಯ, ಹಿಂದೂ ಜಾಗರಣ ವೇದಿಕೆಯ ತಾಲೂಕು ಅಧ್ಯಕ್ಷರಾದ ನರಸಿಂಹ ಶೆಟ್ಟಿ ಮಾಣಿ, ಕಾರ್ಯದರ್ಶಿಗಳಾದ ಮನೋಜ್ ಪೆರ್ನೆ, ರಾಜೇಶ ನಾಯಕ್ ಕರೋಪಾಡಿ, ರವಿ ಭಂಡಾರಿ, ಗೋಳ್ತಮಜಲು ಮಂಡಲ ಕಾರ್ಯವಾಹರಾದ ಸುಜಿತ್ ಕೊಟ್ಟಾರಿ, ಹಾಗೂ ಪರಿವಾರ ಸಂಘಟನೆಗಳ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ