ಉಗ್ರರ ಕುರಿತು ಹುಸಿ ಕರೆ, ಆದರೂ ಹೈ ಅಲರ್ಟ್

ರಾಜ್ಯಕ್ಕೆ 19 ಮಂದಿ ಉಗ್ರರು ನುಸುಳಿದ್ದಾರೆ ಎಂದು ಹುಸಿ ಕರೆ ಮಾಡಿದ ಈಗ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿರುವ ನಿವೃತ್ತ ಸೈನಿಕರೊಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. 65 ರ ಹರೆಯದಸ್ವಾಮಿ ಸುಂದರ ಮೂರ್ತಿ ಬಂಧನಕ್ಕೊಳಗಾಗಿದ್ದು, ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು.ಉಗ್ರರು ನಸುಳಿರುವ ಕುರಿತು ಈ ವ್ಯಕ್ತಿ ಕರೆ ಮಾಡಿದ ಬೆನ್ನಲ್ಲೇ ಜಾಗೃತರಾದ ಕೋಲಾರ ಮತ್ತು ಬೆಂಗಳೂರು ಪೊಲೀಸರು ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಗಿಳಿದಿದ್ದರು.

ಜಾಹೀರಾತು

 

ಬೆಂಗಳೂರು ಹೊರವಲಯದ ಅವಲಹಳ್ಳಿ ಎಂಬಲ್ಲಿ ಸುಂದರ ಮೂರ್ತಿಯನ್ನು ಬಂಧಿಸಿದ್ದಾರೆ. ಸುಂದರಮೂರ್ತಿ ಅವರು 19 ಉಗ್ರರು ತಮಿಳುನಾಡಿನ ರಾಮಾನಾಥಪುರಂನಲ್ಲಿ ಅಡಗಿದ್ದಾರೆ ಎಂದು ಕರೆ ಮಾಡಿದ್ದರು. ಕರೆ ಬಂದ ಬಳಿಕ ಡಿಜಿ-ಐಜಿಪಿ ಅವರು ಎಲ್ಲಾ ಕಡೆಗಳಿಗೆ ಕರೆ ಮಾಡಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದರು.

ಆದರೂ ಶ್ರೀಲಂಕಾದಲ್ಲಿ ಭಯೋತ್ಪಾದಕ ದಾಳಿಯ ನಂತರ ಉದ್ಭವಿಸಿರುವ ಆತಂಕ ಪರಿಸ್ಥಿತಿಯ ಹಿನ್ನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಕರಾವಳಿ ಕಾವಲು ಪೊಲೀಸರಿಂದ ಸಮುದ್ರಗಸ್ತು ತೀವ್ರಗೊಂಡಿದೆ.

ಜಾಹೀರಾತು

ಆಂತರಿಕ ಭದ್ರತಾ ವಿಭಾಗದ(ಐಎಸ್‌ಡಿ) ಡಿಜಿಪಿ ಎ.ಎಮ್‌.ಪ್ರಸಾದ್‌ ಹಾಗೂ ಎಡಿಜಿಪಿ ಸಿ.ಎಚ್‌ ಪ್ರತಾಪರೆಡ್ಡಿ ಅವರು ಉಡುಪಿಗೆ ಭೇಟಿ ನೀಡಿ ಸಮುದ್ರದಲ್ಲಿ ಇಂಟರ್‌ಸೆಪ್ಟರ್‌ ಬೋಟ್‌ನಲ್ಲಿ ಶುಕ್ರವಾರ ಪ್ಯಾಟ್ರೋಲಿಂಗ್‌ ನಡೆಸಿದ್ದರು.

ರಾಜ್ಯ ಕರಾವಳಿಯ ಮಂಗಳೂರಿನಿಂದ ಕಾರವಾರದ ತನಕ ಬಿಗಿ ಭದ್ರತೆ, ಸಮುದ್ರತೀರದ ಆಯಕಟ್ಟಿನ ಸ್ಥಳಗಳಲ್ಲಿ ಗಸ್ತು ಆರಂಭ ಸೇರಿದಂತೆ ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಿರುವಂತೆ ಅವರು ಕರಾವಳಿ ಕಾವಲು ಪಡೆಗೆ ಸೂಚನೆ ನೀಡಿದ್ದಾರೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಉಗ್ರರ ಕುರಿತು ಹುಸಿ ಕರೆ, ಆದರೂ ಹೈ ಅಲರ್ಟ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*