ಭಾರತದ ದಕ್ಷಿಣ ಕರಾವಳಿಗೆ FANI ಚಂಡಮಾರುತದ ಭೀತಿ

  • ಕರಾವಳಿ ಕರ್ನಾಟಕದಲ್ಲೀಗ ಮೋಡ, ಮಳೆ ಬರುವ ಸಾಧ್ಯತೆ

ಭಾರತದ ದಕ್ಷಿಣ ಕರಾವಳಿ ಅದರಲ್ಲೂ ವಿಶೇಷವಾಗಿ ತಮಿಳುನಾಡು ಮತ್ತು ದಕ್ಷಿಣ ಆಂದ್ರದ ಭಾಗಗಳಿಗೆ ‘ಫಣಿ’ ಚಂಡಮಾರುತ ಮುಂದಿನ 72 ಗಂಟೆಗಳೊಳಗೆ ಅಪ್ಪಳಿಸುವ ಭೀತಿ ಇದೆ ಎಂದು ಹವಾಮಾನ ಇಲಾಖೆ ಟ್ವೀಟ್ಟರ್ ನಲ್ಲಿ ತಿಳಿಸಿದೆ. ಇದರ ಪರಿಣಾಮ ಈಗಾಗಲೇ ಕರಾವಳಿ ಕರ್ನಾಟಕದಲ್ಲಿ ಕಾಣಿಸುತ್ತಿದ್ದು, ದಟ್ಟ ಮೋಡದ ವಾತಾವರಣ ಕಂಡುಬಂದಿದೆ. ಮುಂದಿನ ನಾಲ್ಕೈದು ದಿನಗಳೊಳಗೆ ಮಳೆ ಸುರಿದರೆ ಅಚ್ಚರಿ ಇಲ್ಲ.

ಜಾಹೀರಾತು

ಚಂಡಮಾರುತ ನೈಋತ್ಯ ಶ್ರೀಲಂಕಾ ಕರಾವಳಿ ದಾಟಿ ಏಪ್ರಿಲ್ 30ರಂದು ಸಂಜೆಯ ವೇಳೆಗೆ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಲಿದೆ’ ಎಂದು ಹವಾಮಾನ ಇಲಾಖೆ ಹೇಳಿದೆ. ಏಪ್ರಿಲ್ 29 ಮತ್ತು 30ರಂದು ಕೇರಳದಲ್ಲಿ  ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಏಪ್ರಿಲ್ 30 ಮತ್ತು ಮೇ 1ರಂದು ಏಪ್ರಿಲ್ 29 ಮತ್ತು 30ರಂದು ಕೇರಳದಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳುವ ನಿರೀಕ್ಷೆಯಿದೆ. ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಏಪ್ರಿಲ್ 30 ಮತ್ತು ಮೇ 1ರಂದು  ಮಳೆಯಾಗುವ ಸಾಧ್ಯತೆಯಿದೆ. ಹಿಂದೂ ಮಹಾಸಾಗರ ಸೇರಿದಂತೆ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆ ಅನ್ವಯ ಏಪ್ರಿಲ್ 29 ಮತ್ತು 30ಕ್ಕೆ ಕೇರಳದ 4 ಜಿಲ್ಲೆಗಳಾದ ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ, ವಯನಾಡು ಜಿಲ್ಲೆಗಳಲ್ಲಿ ಚಂಡಮಾರುತ ಪ್ರಭಾವ ಬೀರಲಿದೆ.

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ