ಕುಡಿಯುವ ನೀರಿಗೆ ಆತಂಕ ಬೇಡ : ಸಚಿವ ಖಾದರ್

ಮಂಗಳೂರು  ಮಹಾನಗರ ಪಾಲಿಕೆ ವ್ಯಾಪ್ತಿಯ  ಜನತೆಗೆ  ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸರಕಾರ,ಜಿಲ್ಲಾಡಳಿತ ಕ್ರಮ  ತೆಗೆದುಕೊಳ್ಳಲಿದೆ.ಕುಡಿಯುವ ನೀರಿನ ವಿಚಾರದಲ್ಲಿ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.

ಜಾಹೀರಾತು

ಭಾನುವಾರ ತುಂಬೆ ವೆಂಟೆಡ್ ಡ್ಯಾಂ ಗೆ ಅಧಿಕಾರಿಗಳ ತಂಡದೊಂದಿಗೆ  ಭೇಟಿ ನೀಡಿ ಡ್ಯಾಂ ನಲ್ಲಿ ಸಂಗ್ರಹವಾಗಿರುವ ನೀರಿನ ಲಭ್ಯತೆಯ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತುಂಬೆ ಡ್ಯಾಂನಲ್ಲಿ ಪ್ರಸ್ತುತ 4.9 ಮೀ. ನೀರು ಶೇಖರಣೆ ಇದೆ. ಮೇ 28ರ ವರೆಗೆ ವಾರದಲ್ಲಿ 5 ದಿವಸ ಮಂಗಳೂರಿಗೆ ನೀರು ಪೂರೈಕೆ ಮಾಡಬಹುದಾಗಿದ್ದು,ಈ ಅವಧಿಯ ಮಧ್ಯೆ  ಮಳೆ ಸುರಿದರೆ ಜೂನ್ 15ವರೆಗೆ  ಯಾವುದೇ ಸಮಸ್ಯೆ ಇಲ್ಲದೆ ಕುಡಿಯುವ ನೀರನ್ನು ಪೂರೈಸಬಹುದು  ಎಂದರು.

ಸದ್ಯಕ್ಕೆ ನೀರು ಪೂರೈಕೆಗೆ ಯಾವುದೇ ರೇಶನಿಂಗ್ ಇಲ್ಲ.    ಡ್ಯಾಂ ನಲ್ಲಿ ನೀರಿನ ಮಟ್ಟ ಕುಸಿತವಾಗಿ ಭವಿಷ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾದರೆ ಮಾತ್ರ ರೇಶನಿಂಗ್ ಮೂಲಕ ನೀರು ಪೂರೈಕೆಗೆ ಚಿಂತನೆ ನಡೆಸಲಾಗುವುದು, ಶಂಭೂರು ಎಎಂಆರ್ ಡ್ಯಾಂನಲ್ಲಿ ನೀರು ಶೇಖರಣೆಯಾದರೆ ಅಲ್ಲಿಂದ ತುಂಬೆ ಡ್ಯಾಂಗೆ ನೀರನ್ನು ಸರಬರಾಜು ಮಾಡಲಾಗುವುದು.ಜನರು ಕೂಡ ನೀರನ್ನು ಮಿತವಾಗಿ ಬಳಸಿ ಸಹಕಾರ ನೀಡಬೇಕು ಎಂದರು.  ಮಹಾನಗರ ಪಾಲಿಕೆ ವ್ಯಾಪ್ತಿಗೊಳಪಟ್ಟ ತೆರೆದಬಾವಿ ಹಾಗೂ ಬೋರ್‌ವೆಲ್‌ಗಳನ್ನು ಶುದ್ಧೀಕರಣಗೊಳಿಸಿ ಜನರಿಗೆ  ಪ್ರಯೋಜನವಾಗುವಂತೆ ಕ್ರಮ ಕೈಗೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಜನರಿಗೆ   ತೊಂದರೆಯಾಗದಂತೆ ಜಿಲ್ಲಾಡಳಿತ,ಸರಕಾರ ತೀರ್ಮಾನವನ್ನು ತೆಗೆದುಕೊಳ್ಳಲಿದ್ದು,ಜನರು ಮಳೆಗಾಗಿ ದೇವರಲ್ಲಿ ಪ್ರಾರ್ಥಿಸುವಂತೆ ಸಚಿವ ಯು.ಟಿ.ಖಾದರ್ ಮನವಿ ಮಾಡಿದರು‌.

ಮಹಾನಗರ ಪಾಲಿಕೆ ವ್ಯಾಪ್ತಿಯ ಜನರಿಗೆ  ಕಳೆದ  ವರ್ಷದ ಆಡಳಿತಾವಧಿಯಲ್ಲಿ ತೆಗೆದುಕೊಂಡಿರುವ ಕ್ರಮದ ಫಲವಾಗಿ ಈಗ ಮಂಗಳೂರಿನ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿಲ್ಲ ಎಂದ ಸಚಿವರು, ಬೆಳೆಯುತ್ತಿರುವ ಮಂಗಳೂರಿನ ಭವಿಷ್ಯದ ದೃಷ್ಟಿಯಿಂದ ತುಂಬೆ ಡ್ಯಾಂನಲ್ಲಿ ಮಂದೆ 7 ಮೀ.ಗೆ.ನೀರು ಶೇಖರಣೆಗೆ ಕ್ರಮ ಕೈಗೊಳ್ಳಲಾಗುವುದು ಈ ನಿಟ್ಟಿನಲ್ಲಿ ಪರಿಸರದ ರೈತರನ್ನು ವಿಶ್ವಾಸಕ್ಕೆ  ತೆಗೆದುಕೊಂಡು ಅವರೊಂದಿಗೂ ಚರ್ಚಿಸಲಾಗುವುದು ಎಂದರು.  174 ಕೋ.ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಾಜ್ಯಕ್ಕೆ ಮಾದರಿಯಾಗಲಿರುವ ಹರೇಕಳ-ಅಡ್ಯಾರ್ ಡ್ಯಾಂ ಯೋಜನೆಯ ಆಡಳಿತಾತ್ಮಕ ಮಂಜೂರಾತಿಯ  ಹಂತದಲ್ಲಿದೆ ಎಂದರು.

ಜಾಹೀರಾತು

ವಿಧಾನ ಪರಿಷತ್ ಸದಸ್ಯ ,  ಸಂಸದೀಯ ಕಾರ್ಯದರ್ಶಿ  ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್.ಲೋಬೊ ಮಾಜಿ ಮೇಯರ್ ಗಳಾದ ಭಾಸ್ಕರ್.ಕೆ, ಶಶಿಧರ್ ಹೆಗ್ಡೆ, ಮಾಜಿ ಸದಸ್ಯರಾದ ನವೀನ್ ಡಿಸೋಜ, ಕಿಶೋರ್ ಹಾಗೂ ಮಹಾನಗರ ಪಾಲಿಕೆಯ ಅದಿಕಾರಿ ಗಳು ಮತ್ತು ಇಂಜಿನಿಯರ್‌ಗಳು ಈ ಸಂದರ್ಭ ಉಪಸ್ಥಿತರಿದ್ದರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕುಡಿಯುವ ನೀರಿಗೆ ಆತಂಕ ಬೇಡ : ಸಚಿವ ಖಾದರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*