ಕೇರಳದತ್ತ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲಿನ ಎ.ಸಿ.ಕೋಚ್ ನಲ್ಲಿ ಶನಿವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತಾದರೂ ಪ್ರಯಾಣಿಕರ ಸಮಯಪ್ರಜ್ಞೆಯಿಂದ ಸಂಭಾವ್ಯ ಅನಾಹುತ ತಪ್ಪಿಹೋಗಿದೆ.
ಜಾಹೀರಾತು
ಮುಂಬೈನಿಂದ ಎರ್ನಾಕುಲಂಗೆ ತೆರಳುತ್ತಿದ್ದ ರೈಲು ತಡರಾತ್ರಿ ಬೈಂದೂರು ದಾಟಿ ಖಂಬದಕೋಣೆ ಬಳಿ ತಲುಪುವ ಸಂದರ್ಭ ಎ.ಸಿ.ಕೋಚ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಹಿಳೆಯೊಬ್ಬರು ಇದನ್ನು ಕಂಡು ಎಲ್ಲರನ್ನೂ ಎಚ್ಚರಿಸಿದರು. ಕೂಡಲೇ ರೈಲ್ವೆ ಸಿಬ್ಬಂದಿ ಗಮನಕ್ಕೆ ತಂದು ರೈಲನ್ನು ಬೈಂದೂರು ತಾಲೂಕಿನ ಸೇನಾಪುರ ಮತ್ತು ಬಿಜೂರು ಗ್ರಾಮದ ಮಧ್ಯೆ ನಿಲ್ಲಿಸಿ ಬೆಂಕಿ ನಂದಿಸಲಾಯಿತು ಎನ್ನಲಾಗಿದೆ. ಎಲ್ಲ ಪ್ರಯಾಣಿಕರೂ ಕ್ಷೇಮವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಇಲಾಖಾ ಮೂಲಗಳು ತಿಳಿಸಿವೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪ್ರಯಾಣಿಕರ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಬೆಂಕಿ ಕಂಡರೂ ಪಾರು"