ಐಐಟಿಯಲ್ಲಿ ಕಲಿತು ಇಸ್ರೋದಲ್ಲಿ ವಿಜ್ಞಾನಿಯಾಗುವ ಬಯಕೆ: ಅನುಪಮಾ ಕಾಮತ್

ಬಂಟ್ವಾಳ: ನನ್ನ ತಾಯಿಯ ತಂದೆ ಇಸ್ರೋದಲ್ಲಿದ್ದವರು. ನನಗೂ ಐಐಟಿಯಲ್ಲಿ ಕಲಿತು ಇಸ್ರೋದಲ್ಲಿ ವಿಜ್ಞಾನಿಯಾಗುವ ಆಸೆ. ಪಿಸಿಎಂಬಿ ತೆಗೆದುಕೊಂಡು ಶಾರದಾ ವಿದ್ಯಾಲಯಲದಲ್ಲಿ ಪಿಯುಸಿ ವಿಜ್ಞಾನ ವಿಷಯ ಆಯ್ಕೆ ಮಾಡುವೆ. ಡಾಕ್ಟರ್ ಆಗುವ ಆಸಕ್ತಿ ಇಲ್ಲ ಎಂದಳು

ಜಾಹೀರಾತು

ಮಂಗಳವಾರ ಪ್ರಕಟಗೊಂಡ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625ರಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾದ ಬಂಟ್ವಾಳ ವಿದ್ಯಾಗಿರಿಯ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನುಪಮಾ ಕಾಮತ್ ಹೇಳಿದಳು. ಕೈಕುಂಜೆಯಲ್ಲಿ ಮನೆ ಮಾಡಿರುವ ವೈದ್ಯ ದಂಪತಿ ಡಾ. ದಿನೇಶ್ ಕಾಮತ್ ಮತ್ತು ಡಾ.ಅನುರಾಧಾ ಕಾಮತ್ ಅವರ ಪ್ರಥಮ ಪುತ್ರಿ ಅನುಪಮಾ ನೃತ್ಯ, ಸಂಗೀತಗಳನ್ನೂ ಕಲಿತಿದ್ದಾಳೆ. ಪಠ್ಯೇತರ ಚಟುವಟಿಕೆಗಳಲ್ಲೂ ಮುಂದಿದ್ದಾಳೆ.

ಸದ್ಯ ಮಂಗಳೂರಿನ ಸಿಎಫ್ ಎಎಲ್ ನಲ್ಲಿ ಐಐಟಿ ಕೋಚಿಂಗ್ ಪಡೆಯುತ್ತಿರುವ ಅನುಪಮಾ ಈ ಯಶಸ್ಸಿಗೆ ಬಂಟ್ವಾಳ ವಿದ್ಯಾಗಿರಿಯ ಶಿಕ್ಷಕ, ಶಿಕ್ಷಕೇತರ ವೃಂದಕ್ಕೆ ಕೃತಜ್ಞತೆ ಸಲ್ಲಿಸಿದಳು.

ಶಾಲೆಯಲ್ಲಿ ಕೊಡುವ ಕೋಚಿಂಗ್ ಅಷ್ಟೇ ನನಗೆ ಮಾರ್ಗದರ್ಶಿ. ನನ್ನ ಸಹಪಾಠಿಗಳೊಂದಿಗೆ ಗ್ರೂಪ್ ಸ್ಟಡಿ ಮಾಡ್ತಿದ್ದೆ. ನನ್ನೊಡನೆ ಗ್ರೂಪ್ ಸ್ಟಡಿ ಮಾಡುತ್ತಿದ್ದ ಎಲ್ಲರಿಗೂ ಉತ್ತಮ ಅಂಕ ಬಂದಿವೆ ಎಂದಳು. ಮಾರ್ಕ್ ಗಳಿಕೆಗೆಂದು ನಾವೆಂದೂ ಒತ್ತಡ ಹೇರಲಿಲ್ಲ. ಎಂಟು ಗಂಟೆ ನಿದ್ರೆ, ಓದುವ ಸಂದರ್ಭ ಶ್ರದ್ಧೆ, ಏಕಾಗ್ರತೆಯಲ್ಲಿ ಅಭ್ಯಸಿಸುತ್ತಿದ್ದ ಅನುಪಮಾ ಇಂದು ಉತ್ತಮ ಅಂಕ ಗಳಿಸಿರಲು ಆಕೆಯ ಶಾಲೆಯ ಎಲ್ಲ ಶಿಕ್ಷಕ ವೃಂದ ಮತ್ತು ಆಡಳಿತ ಮಂಡಳಿಯ ಪ್ರೋತ್ಸಾಹ ಕಾರಣ ಎಂದು ಆಕೆಯ ಹೆತ್ತವರು ತಿಳಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಐಐಟಿಯಲ್ಲಿ ಕಲಿತು ಇಸ್ರೋದಲ್ಲಿ ವಿಜ್ಞಾನಿಯಾಗುವ ಬಯಕೆ: ಅನುಪಮಾ ಕಾಮತ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*