ಪ್ರಮುಖ ಸುದ್ದಿಗಳು

ರಸ್ತೆಯಿಂದ ಮನೆಯಂಗಳಕ್ಕೆ ಉರುಳಿದ ವ್ಯಾನು: ತಾಯಿ, ಮಗ ಮೃತ್ಯುವಶ

ಪೆರ್ಲ ಪುತ್ತಿಗೆ ರಸ್ತೆಯ ಬಾಡೂರು ಓಣಿಬಾಗಿಲು ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದ ದುರ್ಘಟನೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ, ಸುಮಾರು 35 ಅಡಿ ಆಳಕ್ಕೆ ಉರುಳಿ ಅಲ್ಲಿದ್ದ ಮನೆಯೊಂದರ ಅಂಗಳಕ್ಕೆ ಬಿತ್ತು. ಘಟನೆಯಲ್ಲಿ ತಾಯಿ ಮತ್ತು ಮಗ (ಬೀಫಾತಿಮ ಮತ್ತು ಮಹಮ್ಮದ್ ಷರೀಫ್) ಮೃತಪಟ್ಟರೆ, ಮೂವರು ಗಾಯಗೊಂಡಿದ್ದಾರೆ.

ಜಾಹೀರಾತು

ಪುತ್ತಿಗೆ ಮುಗುನಲ್ಲಿರುವ ಪತ್ನಿಯ ಸಹೋದರನ ಮಗುವಿನ ನಾಮಕರಣ ಕಾರ್ಯಕ್ರಮಕ್ಕೆ ಕುಟುಂಬ ಸಹಿತ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಓಣಿಬಾಗಿಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ವ್ಯಾನ್ ಉರುಳಿ ಬಿತ್ತು. ಅಪಘಾತದಲ್ಲಿ ಷರೀಫ್ ಪತ್ನಿ ಖೈರುನ್ನೀಸಾ , ಮಕ್ಕಳಾದ ಶ೦ನಾ ಹಾಗೂ ಶಹಾರ್ ಬಾನು ಗಂಭೀರ ಗಾಯಗೊಂಡಿದ್ದು , ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ