ಜಿಲ್ಲಾ ಸುದ್ದಿ

ಅಂತರ್ಜಿಲ್ಲಾ ಕಳವು ಆರೋಪಿಯ ಬಳಿ ಇತ್ತು ಮಾಸ್ಕ್, ಕಬ್ಬಿಣದ ರಾಡ್

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊಲೆಯತ್ನ, ಕಳವು ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳ, ಮೂಡುಬಿದಿರೆ ಮೂಲದ ಪ್ರಸಾದ್ ಪೂಜಾರಿ ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಅದ್ವೈತ್ ಜೆಸಿಬಿ ಮತ್ತು ಯುನೈಟೆಡ್ ಟೊಯೋಟಾ ಶೋರೂಮ್ಗೆ ನುಗ್ಗಿ ರಾತ್ರಿ ವೇಳೆ ಕಳವು ಮಾಡಿದ ಪ್ರಕರಣದಲ್ಲಿ ಈತನ ವಿರುದ್ಧ ಕೇಸು ದಾಖಲಾಗಿತ್ತು.

ಜಾಹೀರಾತು

ಆರೋಪಿಯಿಂದ 3 ಲ್ಯಾಪ್ ಟಾಪ್, 4 ಟ್ಯಾಬ್, 3 ಮೊಬೈಲ್, 2 ಚಿನ್ನದ ಬಳೆ, ಕ್ಯಾಶ್ ಲಾಕರ್, 1 ಕ್ಯಾಮೆರಾ ಹಾಗೂ ಕೃತ್ಯ ನಡೆಸಲು ಉಪಯೋಗಿಸಿದ ಲೀವರ್, ಟಾರ್ಚ್, ಮಾಸ್ಕ್ ಹಾಗೂ ಕಬ್ಬಿಣದ ರಾಡ್‌ನ್ನು ಸ್ವಾಧೀನ ಪಡಿಸಿಕೊಂಡಿದ್ದು, ಸೊತ್ತುಗಳ ಒಟ್ಟು ಮೌಲ್ಯ 1.87 ಲ.ರೂ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈತನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಕೊಲೆ ಯತ್ನ ಹಾಗೂ ಕಳವು ಸೇರಿ 3 ಪ್ರಕರಣಗಳು ದಾಖಲಾಗಿದ್ದು, 2014ರಲ್ಲಿ ಈತನಿಗೆ ಕಳವು ಪ್ರಕರಣದಲ್ಲಿ ಪ್ರಕರಣ ಸಾಬೀತಾಗಿ ಶಿಕ್ಷೆಯಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ರಾತ್ರಿ ಕನ್ನ ಕಳವು ಪ್ರಕರಣ ದಾಖಲಾಗಿದ್ದರೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದರೋಡೆ ಯತ್ನ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ