ಫರಂಗಿಪೇಟೆ

ಮರಳು ಅಡ್ಡೆಗೆ ಎಎಸ್ಪಿ ನೇತೃತ್ವದ ಪೊಲೀಸ್ ತಂಡ ದಾಳಿ: ಅಪಾರ ಪ್ರಮಾಣ ಸೊತ್ತು ವಶ

ಪುದು ಗ್ರಾಮದ ಸುಜೀರ್ ನೇತ್ರಾವತಿ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕಾ ಅಡ್ಡೆಗೆ ಬಂಟ್ವಾಳ ಉಪವಿಭಾಗದ ಎಎಸ್ಪಿ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ಸೊತ್ತುಗಳ ವಶಪಡಿಸಿಕೊಂಡಿದ್ದಾರೆ.

ಜಾಹೀರಾತು

ಖಚಿತ ಮಾಹಿತಿ ಮೇರೆಗೆ ಶುಕ್ರವಾರ ಈ ದಾಳಿ ಕಾರ್ಯಾಚರಣೆ  ನಡೆಸಿದ ಎ.ಎಸ್.ಪಿ.ಸೈದುಲ್ ಅಡಾವತ್ ನೇತೃತ್ವದ ಪೊಲೀಸ್ ತಂಡ ಕೋಟ್ಯಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಗೆ ಹಸ್ತಾಂತರ ಮಾಡಿದ್ದಾರೆ.

ದಾಳಿಯ ಸಂದರ್ಭದಲ್ಲಿ  ಸ್ಥಳದಲ್ಲಿದ್ದ ಮೂರು ಟಿಪ್ಪರ್ ಲಾರಿಗಳು,  ಎರಡು ಹಿಟಾಚಿ , ಒಂದು ಗ ಜನರೇಟರ್ ,ಮರಳು ಫಿಲ್ಟರ್ ಮಾಡುವ ಯುನಿಟ್ , ಸುಮಾರು 35 ಲೋಡ್ ನಷ್ಟು ಶೇಖರಿಸಿಡಲಾದ  ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರ ಒಟ್ಟು ಮೌಲ್ಯ  1. 65 ಕೋ.ರೂ. ಆಗಿದೆ ಎಂದು ಅಂದಾಜಿಸಲಾಗಿದೆ. ದಾಳಿಯ ವೇಳೆ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದ ಕಾರ್ಮಿಕರು ಸ್ಥಳದಿಂದ ಪರಾರಿಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ ವೃತ್ತ ನಿರೀಕ್ಷಕರಾದ ಶರಣೇಗೌಡ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ. ಎಂ.ಎಸ್, ಸಿಬ್ಬಂದಿಗಳಾದ ಹನುಮಂತ, ಉಮೇಶ, ಕುಮಾರ್, ನಝೀರ್, ನಾಗನಾಥ್, ಅಜಿತ್ ಬಂಗೇರಾ, ಕಿರಣ್ ಪಾಲ್ಗೊಂಡಿದ್ದರು.ಪ್ರಕರಣದ ಮುಂದಿನ ತನಿಖೆ ಗಣಿ ಮತ್ತು ಭೂವಿಜ್ಙಾನ ಇಲಾಖೆ ನಡೆಸುತ್ತಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ