ಕೊನೆಗೂ ಮೇಲೆ ಬಂದ ಕಾಡುಕೋಣ – ಕಾರ್ಯಾಚರಣೆ ಯಶಸ್ವಿ

ಬಂಟ್ವಾಳನ್ಯೂಸ್ ಫಾಲೋಅಪ್

ಜಾಹೀರಾತು

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಮೂರನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಬಂಟ್ವಾಳ ಸಹಿತ ದ.ಕ ಜಿಲ್ಲೆ ಹಾಗೂ ರಾಜ್ಯದ ಪ್ರಮುಖ ಸುದ್ದಿಗಳನ್ನು ಒದಗಿಸುವ ಮೊದಲನೇ ವೆಬ್ ಪತ್ರಿಕೆ ಸುದ್ದಿ, ಜಾಹೀರಾತುಗಳಿಗೆ ಸಂಪರ್ಕ ಸಂಖ್ಯೆ: 9448548127

ಇದನ್ನೂ ಓದಿರಿ:

ಊರಿಗೆ ಬಂದು ಗೋಬರ್ ಗ್ಯಾಸ್ ಗುಂಡಿ, ಬಾವಿಗೆ ಬಿದ್ದ ಕಾಡುಕೋಣಗಳು!!

ಗೋಬರ್ ಗ್ಯಾಸ್ ಗುಂಡಿಯೊಳಗೆ ಬಿದ್ದಿದ್ದ ಕಾಡುಕೋಣವೊಂದು ಕೊನೆಗೂ ಯಶಸ್ವಿಯಾಗಿ ಮೇಲೆ ಬಂದಿದೆ!

ಕಾಡಬೆಟ್ಟು ಗ್ರಾಮದ ಕಾಡಬೆಟ್ಟು ಪೂರ್ಲೊಟ್ಟು ಎಂಬಲ್ಲಿ ಪೂರ್ಲೊಟ್ಟು ನಿವಾಸಿ ಎಲ್ಪ್ರೆಡ್ ಡಿಸೋಜ ಎಂಬವರ ಮನೆಯ ಗೊಬ್ಬರ ಗ್ಯಾಸ್ ನ ಗುಂಡಿಗೆ ಕಾಡುಕೋಣ ಬಿದ್ದಿತ್ತು. ಮೇಲೆ ಬರಲು ಸಾಧ್ಯವಾಗದೆ ಸಿಕ್ಕಿಹಾಕಿಗೊಂಡಿದ್ದು, ಶನಿವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದ್ದು ಅವರು ಬಂಟ್ವಾಳ ಅರಣ್ಯ ಇಲಾಖೆ ಗೆ ಮಾಹಿತಿ ನೀಡಿದ್ದರು.

ಮಾಹಿತಿ ತಿಳಿದ ಬಳಿಕ ಬಂಟ್ವಾಳ ವಲಯ ಅರಣ್ಯಾಧಿಕಾರಿ ಸುರೇಶ್ ಸ್ಥಳಕ್ಕೆ ಬೇಟಿ ನೀಡಿ ಕಾಡುಕೋಣವನ್ನು ಜೆಸಿಬಿ ಯಂತ್ರದ ಮುಖಾಂತರ ಗೊಬ್ಬರ ಗುಂಡಿಯಿಂದ ಯಶಸ್ವಿಯಾಗಿ ಹೊರಗಡೆ ತೆಗೆಯುವ ಕಾರ್ಯಾಚರಣೆ ನಡೆಸಿದರು.

ಉಪವಲಯ ಅರಣ್ಯಾಧಿಕಾರಿ ಅನಿಲ್, ಡಾ. ಅವಿನಾಶ್ ಭಟ್, ಸ್ನೇಕ್ ಕಿರಣ್ , ನಿತ್ಯಪ್ರಕಾಶ್, ಶ್ರೀಪ್ರಸಾದ್, ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ವಿನಯ್, ಲಕ್ಷ್ಮೀನಾರಾಯಣ್, ಸ್ಮಿತಾ, ಅನಿತಾ ಹಾಗೂ ಪಂಚಾಯತ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ರೈ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಸುಳ್ಯದಲ್ಲೂ ಮೇಲೆ ಬಂತು:

ಅದೇ ರೀತಿ ಸುಳ್ಯ ತಾಲೂಕಿನ ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕೆರೆಗೆ ಬಿದ್ದ ಕಾಡುಕಾಟಿಯನ್ನು ಅಡಿಕೆ ಮರದ ಪಾಲದ ಸಹಾಯದಿಂದ ಮೇಲೆತ್ತಲಾಯಿತು. ಶನಿವಾರ ಬೆಳಗ್ಗೆ ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕೆರೆಗೆ ಕಾಡುಕೋಣ ಬಿದ್ದಿರುವುದು ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ಆಗಮಿಸಿ ಕಾಡುಕೋಣವನ್ನು ಕೆರೆಯಿಂದ ಮೇಲೆತ್ತುವ ಪ್ರಯತ್ನ ಮಾಡಿದರು. ಅಡಿಕೆ ಮರದ ಪಾಲವನ್ನು ತಯಾರು ಮಾಡಿ ಕೆರೆಗೆ ಇಳಿಸಿದ್ದು ಕಾಡುಕೋಣ ಈ ಪಾಲದಲ್ಲಿ ಮೇಲೆ ಬಂತು ಎಂದು ಮಾಹಿತಿ ಲಭಿಸಿದೆ.

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕೊನೆಗೂ ಮೇಲೆ ಬಂದ ಕಾಡುಕೋಣ – ಕಾರ್ಯಾಚರಣೆ ಯಶಸ್ವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*