ಪ್ರಮುಖ ಸುದ್ದಿಗಳು

ಕೊನೆಗೂ ಮೇಲೆ ಬಂದ ಕಾಡುಕೋಣ – ಕಾರ್ಯಾಚರಣೆ ಯಶಸ್ವಿ

ಬಂಟ್ವಾಳನ್ಯೂಸ್ ಫಾಲೋಅಪ್

ಜಾಹೀರಾತು

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಮೂರನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಬಂಟ್ವಾಳ ಸಹಿತ ದ.ಕ ಜಿಲ್ಲೆ ಹಾಗೂ ರಾಜ್ಯದ ಪ್ರಮುಖ ಸುದ್ದಿಗಳನ್ನು ಒದಗಿಸುವ ಮೊದಲನೇ ವೆಬ್ ಪತ್ರಿಕೆ ಸುದ್ದಿ, ಜಾಹೀರಾತುಗಳಿಗೆ ಸಂಪರ್ಕ ಸಂಖ್ಯೆ: 9448548127

ಇದನ್ನೂ ಓದಿರಿ:

ಗೋಬರ್ ಗ್ಯಾಸ್ ಗುಂಡಿಯೊಳಗೆ ಬಿದ್ದಿದ್ದ ಕಾಡುಕೋಣವೊಂದು ಕೊನೆಗೂ ಯಶಸ್ವಿಯಾಗಿ ಮೇಲೆ ಬಂದಿದೆ!

ಕಾಡಬೆಟ್ಟು ಗ್ರಾಮದ ಕಾಡಬೆಟ್ಟು ಪೂರ್ಲೊಟ್ಟು ಎಂಬಲ್ಲಿ ಪೂರ್ಲೊಟ್ಟು ನಿವಾಸಿ ಎಲ್ಪ್ರೆಡ್ ಡಿಸೋಜ ಎಂಬವರ ಮನೆಯ ಗೊಬ್ಬರ ಗ್ಯಾಸ್ ನ ಗುಂಡಿಗೆ ಕಾಡುಕೋಣ ಬಿದ್ದಿತ್ತು. ಮೇಲೆ ಬರಲು ಸಾಧ್ಯವಾಗದೆ ಸಿಕ್ಕಿಹಾಕಿಗೊಂಡಿದ್ದು, ಶನಿವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದ್ದು ಅವರು ಬಂಟ್ವಾಳ ಅರಣ್ಯ ಇಲಾಖೆ ಗೆ ಮಾಹಿತಿ ನೀಡಿದ್ದರು.

ಮಾಹಿತಿ ತಿಳಿದ ಬಳಿಕ ಬಂಟ್ವಾಳ ವಲಯ ಅರಣ್ಯಾಧಿಕಾರಿ ಸುರೇಶ್ ಸ್ಥಳಕ್ಕೆ ಬೇಟಿ ನೀಡಿ ಕಾಡುಕೋಣವನ್ನು ಜೆಸಿಬಿ ಯಂತ್ರದ ಮುಖಾಂತರ ಗೊಬ್ಬರ ಗುಂಡಿಯಿಂದ ಯಶಸ್ವಿಯಾಗಿ ಹೊರಗಡೆ ತೆಗೆಯುವ ಕಾರ್ಯಾಚರಣೆ ನಡೆಸಿದರು.

ಉಪವಲಯ ಅರಣ್ಯಾಧಿಕಾರಿ ಅನಿಲ್, ಡಾ. ಅವಿನಾಶ್ ಭಟ್, ಸ್ನೇಕ್ ಕಿರಣ್ , ನಿತ್ಯಪ್ರಕಾಶ್, ಶ್ರೀಪ್ರಸಾದ್, ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ವಿನಯ್, ಲಕ್ಷ್ಮೀನಾರಾಯಣ್, ಸ್ಮಿತಾ, ಅನಿತಾ ಹಾಗೂ ಪಂಚಾಯತ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ರೈ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಸುಳ್ಯದಲ್ಲೂ ಮೇಲೆ ಬಂತು:

ಅದೇ ರೀತಿ ಸುಳ್ಯ ತಾಲೂಕಿನ ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕೆರೆಗೆ ಬಿದ್ದ ಕಾಡುಕಾಟಿಯನ್ನು ಅಡಿಕೆ ಮರದ ಪಾಲದ ಸಹಾಯದಿಂದ ಮೇಲೆತ್ತಲಾಯಿತು. ಶನಿವಾರ ಬೆಳಗ್ಗೆ ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕೆರೆಗೆ ಕಾಡುಕೋಣ ಬಿದ್ದಿರುವುದು ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ಆಗಮಿಸಿ ಕಾಡುಕೋಣವನ್ನು ಕೆರೆಯಿಂದ ಮೇಲೆತ್ತುವ ಪ್ರಯತ್ನ ಮಾಡಿದರು. ಅಡಿಕೆ ಮರದ ಪಾಲವನ್ನು ತಯಾರು ಮಾಡಿ ಕೆರೆಗೆ ಇಳಿಸಿದ್ದು ಕಾಡುಕೋಣ ಈ ಪಾಲದಲ್ಲಿ ಮೇಲೆ ಬಂತು ಎಂದು ಮಾಹಿತಿ ಲಭಿಸಿದೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.