ಪ್ರಮುಖ ಸುದ್ದಿಗಳು

ಕಾರುಗಳ ಸರಣಿ ಅಪಘಾತ,ಹಲವು ಮಂದಿ ಗಾಯ

ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿ ಅಪಘಾತವಾದ ಘಟನೆ ಸೋಮವಾರ ಕೊಕ್ಕಡದಿಂದ ಧರ್ಮಸ್ಥಳಕ್ಕೆ ಹೋಗುವ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಿಂದ ಹಲವರು ಗಾಯಗೊಂಡಿದ್ದಾರೆ. ಇದೇ ಅಪಘಾತದ ಗಾಯಾಳುಗಳನ್ನು ಕೊಂಡೊಯ್ಯಲು ಬಂದಿದ್ದ ಆಂಬುಲೆನ್ಸ್ ಕೂಡ ಅಪಘಾತಕ್ಕೀಡಾಯಿತು. ಸೌತಡ್ಕ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಂಬುಲೆನ್ಸ್ ಪಲ್ಟಿಯಾಯಿತು.

ಜಾಹೀರಾತು

ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಸ್ವಿಪ್ಟ್ ಡಿಜೈರ್ ಕಾರು ಕಾಪಿನಬಾಗಿಲು ಸಮೀಪಿಸುತ್ತಿದ್ದಂತೆ ಆಲಂಕಾರಿನಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಸೆಲಾರಿಯೋ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಸೆಲಾರಿಯೋ ಕಾರಿನಲ್ಲಿದ್ದ ಯಮುನಾ, ಮುತ್ತಪ್ಪ, ಮೋಹಿನಿ, ಮೋಕ್ಷಿ, ಧನ್ಯ ಎಂಬವರು ಗಾಯಗೊಂಡಿದ್ದಾರೆ. ಪೈಕಿ ಧನ್ಯ ಎಂಬಾಕೆಗೆ ತೀವ್ರ ಗಾಯಗಳಾಗಿದ್ದು ಉಳಿದ ನಾಲ್ಕು ಮಂದಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದೇ ವೇಳೆ ಗಾಯಾಳುಗಳನ್ನು ಕೊಂಡೊಯ್ಯಲೆಂದು ಬಂದ ಆಂಬುಲೆನ್ಸ್ ಸೌತಡ್ಕ ದೇವಳದ ದ್ವಾರದ ಸಮೀಪಿಸುತ್ತಿದ್ದಂತೆ ಎದುರು ಗಡೆಯಿಂದ ವಾಹನಗಳು ಬರುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ನೆಲ್ಯಾಡಿ ಹೊರಠಾಣಾ ಪೋಲೀಸರು ಮತ್ತು ಹೈವೇ ಪ್ಯಾಟ್ರೋಲ್ ಸಿಬ್ಬಂದಿಗಳು ಅಪಘಾತ ಸ್ಥಳಕ್ಕೆ ಆಗಮಿಸಿ ಸಂಚಾರ ನಿಯಂತ್ರಣ ನಡೆಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts