ಬಂಟ್ವಾಳ

ರೋಟರಿ ಟೌನ್ ವತಿಯಿಂದ ಅಂತರಾಷ್ಟ್ರೀಯ ರೆಡ್ ಕ್ರಾಸ್ ದಿನಾಚರಣೆ

ಮಾನವೀಯತೆಯಿಂದ ಶಾಂತಿಯ ಕಡೆಗೆ ಆದರ್ಶ ಸಾರುತ್ತಿರುವ  ರೆಡ್ ಕ್ರಾಸ್ ಸಂಸ್ಥೆ ವಿಶ್ವ ಮಾನ್ಯ ವಾಗಿದೆ ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಉಮೇಶ್ ನಿರ್ಮಲ್ ಹೇಳಿದರು.

ಜಾಹೀರಾತು

ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ರೋಟರಿ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದರು .

ನೊಂದವರ, ದುರ್ಬಲರ ,ರೋಗಿಗಳ, ಶೋಷಿತರ, ಪ್ರಾಕೃತಿಕ ವಿಕೋಪಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಕರ ಸೇವೆಗೆ ಸಮರ್ಪಣೆ ಮಾಡಿದ ಮೇ ತಿಂಗಳ 8 ನೇ ತಾರೀಕು ಮಹತ್ವ ಪಡೆದಿದೆ ಎಂದರು. ವಿಶ್ವದಲ್ಲಿ ಅತೀ ಹೆಚ್ಚು ಜೀವ ಹಾನಿ ಮಾಡುವಲ್ಲಿ ಯುದ್ಧಗಳು ಕಾರಣವಾಗಿವೆ. 1863 ರಿಂದ  ಸ್ಥಾಪಕರಾದ ಹೆನ್ರಿ ಡ್ಯುನಾಂಟ್ ಆಶಯವನ್ನು ರಕ್ತ ಸಂಗ್ರಹಣ ಸೇವೆ ಮೂಲಕ  ಆರಂಭಿಸಿ ಜನಮಣ್ಣನೆ ಗಳಿಸಿದೆ.  ರೆಡ್ ಕ್ರಾಸ್ ಸಂಸ್ಥೆ ವಿಶ್ವ ದಾದ್ಯಂತ ನಿಷ್ಪಕ್ಷಪಾತ ಮತ್ತು ಏಕತೆಯಿಂದ ಸ್ವಯಂಸೇವಕರ ಮಾನವೀಯತೆಯ ತಳಹದಿಯ  ಆಧಾರದ ಮೇಲೆ ಕೆಲಸ ಮಾಡುತ್ತದೆ. ರೋಟರಿ ಸಹಭಾಗಿತ್ವ ದಲ್ಲಿ ಇಂತಹ ಭಾವನೆಗಳಿಗೆ ಧ್ವನಿ ನೀಡುವ ಕೆಲಸ ನಿರಂತರವಾಗಿರಲಿ ಎಂದರು.

ಸಮಾರಂಭದಲ್ಲಿ ದಿನದ ಅದೃಷ್ಟವಂತ ಸದಸ್ಯರಾದ ಸುರೇಶ್ ಸಾಲ್ಯಾನ್ ರನ್ನು ಗೌರವಿಸಲಾಯಿತು. ಕಾರ್ಯದರ್ಶಿ ಜಯರಾಜ್ ಬಂಗೇರ ಉಪಸ್ತಿತರಿದ್ದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.