ಬಂಟ್ವಾಳ

ರೋಟರಿ ಟೌನ್ ವತಿಯಿಂದ ಅಂತರಾಷ್ಟ್ರೀಯ ರೆಡ್ ಕ್ರಾಸ್ ದಿನಾಚರಣೆ

ಮಾನವೀಯತೆಯಿಂದ ಶಾಂತಿಯ ಕಡೆಗೆ ಆದರ್ಶ ಸಾರುತ್ತಿರುವ  ರೆಡ್ ಕ್ರಾಸ್ ಸಂಸ್ಥೆ ವಿಶ್ವ ಮಾನ್ಯ ವಾಗಿದೆ ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಉಮೇಶ್ ನಿರ್ಮಲ್ ಹೇಳಿದರು.

ಜಾಹೀರಾತು

ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ರೋಟರಿ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದರು .

ನೊಂದವರ, ದುರ್ಬಲರ ,ರೋಗಿಗಳ, ಶೋಷಿತರ, ಪ್ರಾಕೃತಿಕ ವಿಕೋಪಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಕರ ಸೇವೆಗೆ ಸಮರ್ಪಣೆ ಮಾಡಿದ ಮೇ ತಿಂಗಳ 8 ನೇ ತಾರೀಕು ಮಹತ್ವ ಪಡೆದಿದೆ ಎಂದರು. ವಿಶ್ವದಲ್ಲಿ ಅತೀ ಹೆಚ್ಚು ಜೀವ ಹಾನಿ ಮಾಡುವಲ್ಲಿ ಯುದ್ಧಗಳು ಕಾರಣವಾಗಿವೆ. 1863 ರಿಂದ  ಸ್ಥಾಪಕರಾದ ಹೆನ್ರಿ ಡ್ಯುನಾಂಟ್ ಆಶಯವನ್ನು ರಕ್ತ ಸಂಗ್ರಹಣ ಸೇವೆ ಮೂಲಕ  ಆರಂಭಿಸಿ ಜನಮಣ್ಣನೆ ಗಳಿಸಿದೆ.  ರೆಡ್ ಕ್ರಾಸ್ ಸಂಸ್ಥೆ ವಿಶ್ವ ದಾದ್ಯಂತ ನಿಷ್ಪಕ್ಷಪಾತ ಮತ್ತು ಏಕತೆಯಿಂದ ಸ್ವಯಂಸೇವಕರ ಮಾನವೀಯತೆಯ ತಳಹದಿಯ  ಆಧಾರದ ಮೇಲೆ ಕೆಲಸ ಮಾಡುತ್ತದೆ. ರೋಟರಿ ಸಹಭಾಗಿತ್ವ ದಲ್ಲಿ ಇಂತಹ ಭಾವನೆಗಳಿಗೆ ಧ್ವನಿ ನೀಡುವ ಕೆಲಸ ನಿರಂತರವಾಗಿರಲಿ ಎಂದರು.

ಸಮಾರಂಭದಲ್ಲಿ ದಿನದ ಅದೃಷ್ಟವಂತ ಸದಸ್ಯರಾದ ಸುರೇಶ್ ಸಾಲ್ಯಾನ್ ರನ್ನು ಗೌರವಿಸಲಾಯಿತು. ಕಾರ್ಯದರ್ಶಿ ಜಯರಾಜ್ ಬಂಗೇರ ಉಪಸ್ತಿತರಿದ್ದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ