ಮೇ. 17ರಿಂದ 22ರವರೆಗೆ ಕಕ್ಯಪದವು ಗರಡಿ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಗರೋಡಿ ಕ್ಷೇತ್ರದ ನೂತನ ಶಿಲಾಮಯ ಆಲಯದಲ್ಲಿ ಶ್ರೀ ಕಡಂಬಿಲ್ತಾಯ, ಕೊಡಮಣಿತ್ತಾಯಿ,ದೈವೊಂಕುಳು, ಬ್ರಹ್ಮಬೈದರ್ಕಳ, ಮಾಯಾಂದಲ್ ದೈವಗಳ ಪುನರ್ ಪ್ರತಿಷ್ಠೆ,ಬ್ರಹ್ಮಕಲಶೋತ್ಸವ ಮೇ.17-19 ರವರೆಗೆ ನಡೆಯಲಿದೆ. ವಾರ್ಷಿಕ ಜಾತ್ರಾ ಮಹೋತ್ಸವ ಮೇ.22ರವರೆಗೆ ನಡೆಯುವುದು ಎಂದು ಕಕ್ಕೆಪದವು ಶ್ರೀ ಬ್ರಹ್ಮಬೈದರ್ಕಳ ಗರೋಡಿ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಜಾಹೀರಾತು

ಶನಿವಾರ ಸಂಜೆ ಶ್ರೀ ಕ್ಷೇತ್ರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೋಟಿ-ಚೆನ್ನಯ್ಯರೇ ಸ್ಥಾಪಿಸಿದ ಜಿಲ್ಲೆಯ 66 ಗರಡಿಗಳ ಪೈಕಿ ಕಕ್ಯಪದವು ಶ್ರೀ ಬ್ರಹ್ಮಬೈದರ್ಕಳ ಗರೋಡಿಯು ಒಂದಾಗಿದೆ. ವಿಶಿಷ್ಠವಾದ  ತೌಳವ ದ್ರಾವಿಡ ಶೈಲಿಯಲ್ಲಿ ಗರೋಡಿಯನ್ನು ಶಿಲಾಮಯವಾಗಿ ಸುಮಾರು 3 ಕೋಟಿ ರೂ.ವೆಚ್ಚದಲ್ಲಿ  ಪುನರ್ ನಿರ್ಮಿಸಲಾಗುತ್ತಿದೆ, ಎರಡೂವರೆ ಎಕ್ರೆ ಜಮೀನನ್ನು ಸರಕಾರ ಕಳೆದ ಸಂಪುಟ ಸಭೆಯಲ್ಲಿ ಗರೋಡಿಯ ಹೆಸರಿಗೆ ಮಂಜೂರಾತಿ ನೀಡಿದೆ ಎಂದರು.

ಬ್ರಹ್ಮಶ್ರೀ ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯರವರ ಮಾರ್ಗದರ್ಶನ,ಕಕ್ಯ ಶ್ರೀನಿವಾಸ ಅರ್ಮುಡ್ತಾಯರವರ ಉಪಸ್ಥಿತಿಯಲ್ಲಿ ಕ್ಷೇತ್ರದ ಅಸ್ರಣ್ಣರಾದ ರಾಜೇಂದ್ರ ಅರ್ಮುಡ್ತಾಯರವರ ನೇತೃತ್ವದಲ್ಲಿ ವಿವಿಧ ವೈಧಿಕ ವಿಧಿವಿಧಾನಗಳು ನಡೆಯಲಿದ್ದು, ಮೇ.17ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಸರ್ವ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ ಎಂದರು.

ಮೇ.19 ರಂದು ಶಿಖರ, ಧ್ವಜಸ್ತಂಭ,ದೈವಗಳ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ನಡೆಯಲಿದೆ.ಬ್ರಹ್ಮಕಲಶದ ಪ್ರತಿದಿನ ನಿರಂತರವಾಗಿ ಸಾರ್ವಜನಿಕ ಅನ್ನಸಂತರ್ಪಣೆ,ಸಂಜೆಯ ವೇಳೆ ನಡೆಯುವ ಧಾರ್ಮಿಕ ಸಭೆಯಲ್ಲಿ ವಿವಿಧ ಕ್ಷೇತ್ರದ ಮಠಾಧೀಶರು ಆರ್ಶೀವಚನ ನೀಡಲಿದ್ದಾರೆ. ಸಾಮಾಜಿಕ,ರಾಜಕೀಯ,ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ.ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ರಮಾನಾಥ ರೈ ವಿವರಿಸಿದರಲ್ಲದೆ ಬ್ರಹ್ಮಕಲಶದ ಯಶಸ್ವಿಗೆ ವಿವಿಧ ಉಪಸಮಿತಿಗಳನ್ನು ರಚಿಸಲಾಗಿದೆ.ಹಾಗೆಯೇ ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ ಎಂದರು.  ಮೇ.19 ರಿಂದ 22 ರವರೆಗೆ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರೆಯು ನಡೆಯಲಿದೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿ ಕಾರ್ಯಾಧ್ಯಕ್ಷ ಪದ್ಮಶೇಖರ ಜೈನ್, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ ಕೆ., ವಿವಿಧ ಸಮಿತಿ ಪದಾಧಿಕಾರಿಗಳಾದ ಎ. ಚೆನ್ನಪ್ಪ ಸಾಲಿಯಾನ್, ಚಂದ್ರಶೇಖರ.ಕೆ, ವಾಸುದೇವ ಮಯ್ಯ, ಬೇಬಿ ಕುಂದರ್, ವಿಜಯಕುಮಾರ್, ವೀರೇಂದ್ರ ಕುಮಾರ್ ಜೈನ್, ಬಾಲಕೃಷ್ಣ ಅಂಚನ್, ದಿನೇಶ್ ಬಂಗೇರ, ಧರ್ಣಪ್ಪ ಪೂಜಾರಿ, ರಾಜೀವ ಕೆ. ವಿಶ್ವನಾಥ ಸಾಲ್ಯಾನ್ ಬಿತ್ತ, ಡೀಕಯ್ಯ ಕುಲಾಲ್  ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮೇ. 17ರಿಂದ 22ರವರೆಗೆ ಕಕ್ಯಪದವು ಗರಡಿ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*