ಜಿಲ್ಲಾ ಸುದ್ದಿ

ಮಸೀದಿಯಲ್ಲಿ ಹಿಂದು ಯುವಕನ ಮದ್ವೆ ಔತಣಕೂಟ

ಹಿಂದೂ ಯುವಕನೋರ್ವ ತನ್ನ ಮದುವೆಯ ಔತಣಕೂಟದ ಅಂಗವಾಗಿ ಮಸೀದಿಯಲ್ಲಿ ಮುಸ್ಲಿಮರಿಗೆ ಇಫ್ತಾರ್ ಕೂಟವನ್ನು ಏರ್ಪಡಿಸುವ ಮೂಲಕ ಸೌಹಾರ್ದ ಮೆರೆದಿದ್ದಾರೆ, ಬಂಟ್ವಾಳ ತಾಲೂಕಿನ ಕೋಡಪದವು ಸಮೀಪದ ಕುಕ್ಕಿಲ ಎಂಬಲ್ಲಿ ಈ ಕಾರ್ಯಕ್ರಮ ನಡೆದಿದೆ ಎಂಬ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

ಜಾಹೀರಾತು

ಕೋಡಪದವಿನ ಕುಕ್ಕಿಲದ ನಿವಾಸಿ, ನವವಿವಾಹಿತ ಧನಂಜಯ್ ಶುಕ್ರವಾರ ಇಫ್ತಾರ್ ಕೂಟವನ್ನು ಆಯೋಜಿದ್ದರು. ಈ ಸಂದರ್ಭದಲ್ಲಿ ಕೋಡಪದವು ಹಾಗೂ ಕುಕ್ಕಿಲ ಜಮಾಅತ್ನ ಸುಮಾರು 150 ಮಂದಿ ಕುಕ್ಕಿಲ ಮಸೀದಿಯಲ್ಲಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.

ಕೋಡಪದವಿನ ಕುಕ್ಕಿಲದ ಧನಂಜಯ್ ರಿಗೆಮೇ 8 ರಂದು ವಿಟ್ಲ ದಲ್ಲಿ ಮದುವೆ ನಡೆದಿತ್ತು. ಮದುವೆಗೆ ಊರಿನ ಎಲ್ಲರನ್ನು ಆಹ್ವಾನಿಸಲಾಗಿತ್ತು. ಈ ಸಂದರ್ಭ ಊರಿನ ಮುಸ್ಲಿಮರು ಮದುವೆಗೆ ಬಂದು ಶುಭ ಹಾರೈಸಿ ತೆರಳಿದ್ದು, ರಮಝಾನ್ ಉಪವಾಸದ ಕಾರಣ ಮದುವೆಯ ಔತಣಕೂಟದಲ್ಲಿ ಅವರು ಭಾಗವಹಿಸಿರಲಿಲ್ಲ. ಈ ನಿಟ್ಟಿನಲ್ಲಿ ಕುಕ್ಕಿಲದ ಮಸೀದಿಯಲ್ಲಿ ಇಫ್ತಾರ್ ಕೂಟವನ್ನು ಧನಂಜಯ್ ಏರ್ಪಡಿಸಿದ್ದು ಶ್ಲಾಘನೆಗೆ ಪಾತ್ರವಾಗಿದೆ ಎಂಬ ವಿಚಾರವೀಗ ಜಾಲತಾಣಗಳಲ್ಲಿ ಶ್ಲಾಘನೆಗೆ ಪಾತ್ರವಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ