ಬಂಟ್ವಾಳ

ನಾಳೆ ತಾಪಂನಲ್ಲಿ ಪ್ರಗತಿ ಪರಿಶೀಲನಾ ಸಭೆ

ಬಂಟ್ವಾಳ: ಬುಧವಾರ ಮಧ್ಯಾಹ್ನ 2.30ಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಜಿಪಂ ಉಪಕಾರ್ಯದರ್ಶಿ ಮಹೇಶ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.

ಈ ಕುರಿತು ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಪ್ರಕಟಣೆ ನೀಡಿದ್ದು, ಸಭೆಯಲ್ಲಿ ಎಲ್ಲ ಗ್ರಾಪಂಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಇಲಾಖಾಧಿಕಾರಿಗಳು ಭಾಗವಹಿಸಲಿರುವರು.

ಜಾಹೀರಾತು

ನರೇಗಾ, ಅಭಿವೃದ್ಧಿ ಅನುದಾನ, 14ನೇ ಹಣಕಾಸು, ಸ್ವಂತ ಅನುದಾನದ ಕ್ರಿಯಾಯೋಜನೆ, ಗ್ರಾಪಂನಲ್ಲಿರುವ ಕುಡಿಯುವ ನೀರಿನ ಸ್ಥಾವರ, ಅನುಪಯುಕ್ತ ಕೊಳವೆ ಬಾವಿಯ ವಿವರ, ಎಸ್.ಸಿ, ಎಸ್.ಟಿ. ಶೇ.25 ನಿಧಿ ಬಳಕೆ, ಅಂಗವಿಕಲರಿಗೆ ಇರುವ ನಿಧಿ ಬಳಕೆ, ನೀರಿನ ತೆರಿಗೆ ವಸೂಲಾತಿ, ಮೀಟರಿಂಗ್, ಘನತ್ಯಾಜ್ಯ ವಿಲೇವಾರಿ, ಎನ್.ಆರ್.ಎಲ್.ಎಂ, ಗ್ರಾಮವಿಕಾಸ ಮತ್ತು ಮುಖ್ಯಮಂತ್ರಿ ಗ್ರಾಮವಿಕಾಸ ಯೋಜನೆ ಪ್ರಗತಿ, ವಸತಿ ಯೋಜನೆ, ರಾಜೀವ ಗಾಂಧಿ ಸಶಕ್ತೀಕರಣ ಯೋಜನೆ, ಚೈತನ್ಯ ಯೋಜನೆ, ರಾಷ್ಟ್ರೀಯ ಜೈವಾನಿಲ ಯೋಜನೆ ಸಹಿತ ಹಲವು ವಿಚಾರಗಳಿಗೆ ಸಂಬಂಧಿ ಪ್ರಗತಿ ಪರಿಶೀಲನೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ