ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಕ್ಲೀನಿಂಗ್, ಲಿಫ್ಟ್ ದುರಸ್ತಿಗೆ ಕ್ರಮ

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಗುರುವಾರ ಬೆಳಗ್ಗೆಯೇ ಕಚೇರಿ ಸಿಬ್ಬಂದಿ ಪೊರಕೆ ಹಿಡಿದು ಮೆಟ್ಟಿಲು ಗುಡಿಸುತ್ತಿದ್ದರೆ, ಫೈಲುಗಳನ್ನು ಕಟ್ಟಿ ಕಾರಿಡಾರ್ ಗಳನ್ನು ಸಾರ್ವಜನಿಕರಿಗೆ ತೆರವುಗೊಳಿಸುವ ಕಾರ್ಯ ನಡೆಯಿತು.

ಜಾಹೀರಾತು

ಈ ಕುರಿತು ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ಸಣ್ಣರಂಗಯ್ಯ, ಈಗಾಗಲೇ ಮಿನಿ ವಿಧಾನಸೌಧದ ಲಿಫ್ಟ್ ಸಾರ್ವಜನಿಕರಿಗೆ ಉಪಯೋಗಿಸಲು ಅನುಕೂಲವಾಗುವಂತೆ ತಂತ್ರಜ್ಞರಿಗೆ ಪತ್ರ ಬರೆಯಲಾಗಿದೆ. ಜನರೇಟರ್ ಮತ್ತು ಬ್ಯಾಟರಿಯನ್ನು ಸುಸ್ಥಿತಿಯಲ್ಲಿಡಲು ಸಂಬಂಧಿಸಿದ ಇಲಾಖಾಧಿಕಾರಿಗಳ ಸಹಕಾರ ಕೋರಲಾಗಿದೆ. ವಾರದೊಳಗೆ ಸಮಸ್ಯೆಯನ್ನು ಪರಿಹರಿಸಲಾಗುವುದು. ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.

ಉಪತಹಶೀಲ್ದಾರ್ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ತಾಲೂಕು ಕಚೇರಿ ಸಿಬ್ಬಂದಿ ಕಾರಿಡಾರ್ ಗಳಲ್ಲಿರುವ ಕಾಗದಪತ್ರಗಳನ್ನು ತೆರವುಗೊಳಿಸಿ ನಿಗದಿಪಡಿಸಿದ ಜಾಗದಲ್ಲಿಡುವ ಕಾರ್ಯವನ್ನು ನಡೆಸುತ್ತಿದ್ದರೆ, ಸಿಬ್ಬಂದಿಯೋರ್ವರು ಮೆಟ್ಟಿಲುಗಳನ್ನು ಶುಚಿಗೊಳಿಸುತ್ತಿರುವುದು ಗುರುವಾರ ಬೆಳಗ್ಗೆ ಕಂಡುಬಂತು.

ಸಾರ್ವಜನಿಕರ ಸಹಕಾರವೂ ಮುಖ್ಯ:

ಮಿನಿ ವಿಧಾನಸೌಧದ ಗೋಡೆಗೆ ಕಾಲಿಟ್ಟು ಗಲೀಜು ಮಾಡುವುದು, ಎಲ್ಲೆಂದರಲ್ಲಿ ಉಗಿಯುವುದು, ಶೌಚಾಲಯಕ್ಕೆ ಹೋದರೆ ನೀರು ಹಾಕದೇ ಮರಳುವುದು, ಕಸದ ಕೊಂಪೆಯನ್ನಾಗಿಸಿ ಕಟ್ಟಡವನ್ನು ಅಶುಚಿತ್ವದೆಡೆಗೆ ಮಾಡುವ ಕಾರ್ಯವನ್ನು ಇಲ್ಲಿಗೆ ಆಗಮಿಸುವವರೂ ಮಾಡುತ್ತಿರುವ ಕಾರಣ ಸಾರ್ವಜನಿಕರೂ ಈ ಕುರಿತು ಜಾಗೃತರಾಗಿ ಕಟ್ಟಡದ ಶುಚಿತ್ವದ ಕುರಿತು ಕಾಳಜಿ ವಹಿಸಬೇಕು, ಕಸ ಕಡ್ಡಿಗಳನ್ನು ಎಸೆಯದೆ ಆಡಳಿತದೊಂದಿಗೆ ಸಹಕರಿಸಬೇಕು ಎಂದು ಉಪತಹಶೀಲ್ದಾರ್ ರಾಜೇಶ್ ನಾಯ್ಕ್ ತಿಳಿಸಿದರು.

ಕರೆಂಟ್ ಕೈಕೊಟ್ಟರೆ ಆಧಾರ್, ನೆಮ್ಮದಿ ಸಹಿತ ಕಂಪ್ಯೂಟರ್ ಬಳಕೆಯಿಂದ ಮಾಡುವ ಎಲ್ಲ ಕೆಲಸ ಕಾರ್ಯಗಳೂ ಸ್ಥಗಿತಗೊಳ್ಳುತ್ತವೆ, ಜನರೇಟರ್ ವ್ಯವಸ್ಥೆಯನ್ನು ಶೀಘ್ರ ಸ್ಥಾಪಿಸಬೇಕು ಹಾಗೂ ಅದು ನಿರಂತರವಾಗಿ ನಡೆಯಬೇಕು ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಕ್ಲೀನಿಂಗ್, ಲಿಫ್ಟ್ ದುರಸ್ತಿಗೆ ಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*