ಬಂಟ್ವಾಳ

ಯೂಸುಫ್ ನಬ್ಹಾನಿ ಅವರಿಗೆ ಎಪಿ ಉಸ್ತಾದರಿಂದ ವಿಶೇಷ ಪ್ರಶಸ್ತಿ

ಅಂತರ್ ರಾಷ್ಟ್ರೀಯ ಹೋಲಿ ಕುರ್‌ಆನ್ ಅವಾರ್ಡ್ ರಂಝಾನ್ ಪ್ರಭಾಷಣದಲ್ಲಿ ದುಬೈ ಜಿದ್ದಾಫ್ ಅಲ್ ವಸಲ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು, ಇರಾ ಗ್ರಾಮದ ಕುಕ್ಕಾಜೆ ನಿವಾಸಿ ಯೂಸುಫ್ ನಬ್ಹಾನಿ ಅವರಿಗೆ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಭಾರತದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ಅವರು ಪ್ರಶಸ್ತಿ ವಿತರಿಸಿದರು.

 

ಜಾಹೀರಾತು

ಈ ಸಂದರ್ಭ ಬಾಯಾರ್ ತಂಙಳ್, ತ್ವಾಹಾ ತಂಙಳ್, ಡಾ. ಮುಹಮ್ಮದ್ ಕುಂಞಿ ಸಖಾಫಿ ಕೊಲ್ಲಂ ಮೊದಲಾದವರು ಉಪಸ್ಥಿತರಿದ್ದರು. ಯೂಸುಫ್ ನಬ್ಹಾನಿ ಅವರು ಕಳೆದ ೧೫ ವರ್ಷಗಳಿಂದ ಕಾಸರಗೋಡು ದೇಳಿಯಲ್ಲಿರುವ ಜಾಮಿಯಾ ಸಅದಿಯಾ ವಿದ್ಯಾಸಂಸ್ಥೆಯ ಲೈಬ್ರರಿಗೆ ಮೌಲ್ಯಯುತ ಅರಬಿಕ್ ಇಸ್ಲಾಮಿಕ್ ಗ್ರಂಥಗಳನ್ನು ಪ್ರಾಯೋಜಕರ ಮೂಲಕ ಉಚಿತವಾಗಿ ನೀಡುತ್ತಾ ಬರುತ್ತಿದ್ದಾರೆ. ದುಬೈಯ ಜಾಮಿಯಾ ಸಅದಿಯಾ ಅರಬಿಯಾ ಇಂಡಿಯನ್ ಸೆಂಟರ್ ಯೂಸುಫ್ ನಬ್ಹಾನಿ ಅವರಿಗೆ ಈ ವಿಶೇಷ ಪ್ರಶಸ್ತಿಯನ್ನು ಪ್ರಾಯೋಜಿಸಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts