ಬಂಟ್ವಾಳ

ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಕೆಲವೆಡೆ ಮಳೆ, ಉಳಿದೆಡೆ ಕೇವಲ ಗುಡುಗು, ಮಿಂಚಿನ ಪ್ರದರ್ಶನ, ಬರಿದಾದ ನೇತ್ರಾವತಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ಉರಿಸೆಖೆ, ಮೋಡ ಕವಿದ ವಾತಾವರಣ ಇದ್ದರೆ, ರಾತ್ರಿಯ ವೇಳೆ ಬೆಳ್ತಂಗಡಿ ತಾಲೂಕು ಹಾಗೂ ಬಂಟ್ವಾಳ ತಾಲೂಕಿನ ಕೆಲ ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿದಿದೆ. ಆದರೆ ಹೆಚ್ಚಿನ ಭಾಗಗಳಲ್ಲಿ ಗುಡುಗು, ಮಿಂಚಿನ ಪ್ರದರ್ಶನವಷ್ಟೇ ಆಗಿದ್ದು, ಸೆಖೆ ಮತ್ತಷ್ಟು ಹೆಚ್ಚಾಗಿದೆ.

dharmasthala

ರಾತ್ರಿ ಸುಮಾರು 8ಗಂಟೆಗೆ ಮಿಂಚು, ಗುಡುಗು ಸಹಿತ ಉಜಿರೆ, ಕಾಶಿಬೆಟ್ಟು, ಬೆಳ್ತಂಗಡಿ, ಧರ್ಮಸ್ಥಳ, ಮುಂಡಾಜೆ, ಕಾನರ್ಪ, ಗೇರುಕಟ್ಟೆ, ಹಲೇಜಿ, ಗುರಿಪಳ್ಳ, ಸತ್ಯನಪಲ್ಕೆ, ಸೇರಿದಂತೆ ಹಲವೆಡೆ ಮಳೆ ತಂಪೆರೆದಿದೆ. ಇದರಿಂದಾಗಿ ವ್ಯತ್ಯಯಗೊಂಡಿದೆ.

ಜಾಹೀರಾತು

ಬಂಟ್ವಾಳ ತಾಲೂಕಿನ ಕೆಲವೆಡೆ ಶನಿವಾರ ಸಂಜೆಯ ಬಳಿಕ ಗುಡುಗು,ಸಿಡಿಲಿನೊಂದಿಗೆ ಮಳೆ ಸುರಿದು ತಂಪೆರೆದರೆ ಉಳಿದೆಡೆ ಕೇವಲ ಗುಡುಗಿನ ಸದ್ದು ಕೇಳಿತು. ಬಿ.ಸಿ.ರೋಡ್ ಸುತ್ತಮುತ್ತ ಕೆಲ ಹನಿ ಮಳೆ ಸುರಿದಿದ್ದು, ಗುಡುಗಿನ ಅಬ್ಬರ ಜೋರಾಗಿತ್ತು. ಮಾಣಿ, ಸರಪಾಡಿ ಮತ್ತಿತರ ಕಡೆಗಳಲ್ಲಿ ಮಳೆಯಾಗಿದ್ದರೆ, ಹಲವೆಡೆ ಹನಿ ಮಳೆಯಷ್ಟೇ ಸುರಿಯಿತು.

ಬೆಳ್ತಂಗಡಿಯ ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದ ಬಳಿ ಕಿಂಡಿ ಅಣೆಕಟ್ಟು ಕಟ್ಟಿದ ಕಾರಣ ತೀರ್ಥ ಮತ್ತು ಅಭಿಷೇಕಕ್ಕೆ ನೀರಿದೆ. ತೀರ್ಥ ಗುಂಡಿಯಲ್ಲೂ ನಾಲ್ಕು ಗುಂಡಿಗಳಲ್ಲಿ ನೀರು ಕಡಿಮೆ ಆಗಿದೆ. ಅಸ್ವಲ್ಪ ದಿನಗಳ ಕಾಲ ಸಾಕಾಗುತ್ತೆ. ನೀರಿನ ಹರಿವು ಕಡಿಯಾಗುತ್ತಾ ಇದೆ. ನೇತ್ರಾವತಿ ನದಿಯ ಪೂರಕ ನದಿಗಳಲ್ಲಿ ನೀರು ಇಂಗುತ್ತಿದೆ. ಉಪನದಿಗಳ ನೀರು ಇಂಗುತ್ತಿರುವ ಪರಿಣಾಮ ನೀರಿಗೆ ಸಮಸ್ಯೆ ‌ಉದ್ಭವವಾಗಿದೆ.

ಡಾ. ಹೆಗ್ಗಡೆ ಮನವಿ:

ಕಾಡು ಉಳಿಸದೇ ಇರುವ ಕಾರಣ ಈ ಸಮಸ್ಯೆ ಎದುರಾಗಿದೆ ಎಂದಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ,  ಅರಣ್ಯನಾಶ, ಸಕಲೇಶಪುರದ ಬಳಿ ಪಶ್ಚಿಮ ಘಟ್ಟ ಅರಣ್ಯದ ನಾಶ, ಉಪನದಿ ಹೇಮಾವತಿಯನ್ನು ಬರಡುಗೊಳಿಸಿದ್ದು, ಮುಂದಿನ 15-20 ವರ್ಷಗಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು ಎಂದಿದ್ದಾರೆ. ಮಳೆ ಶುರುವಾಗುವವರೆಗೆ ಪ್ರವಾಸಿಗರು ತಮ್ಮ ಯಾತ್ರೆಯನ್ನು ಮುಂದೂಡಬೇಕು ಎಂದು ಮತ್ತೊಮ್ಮೆ ಮನವಿ ಮಾಡಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಾ.30ರಂದು ಪದ್ಯಾಣಕ್ಕೆ ಏಕಾದಶ ತೀರ್ಥಗಳ ಭವ್ಯ ಮೆರವಣಿಗೆ:

| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…

16 hours ago

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

2 days ago