ಸೋಮವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಸರಪಾಡಿಯಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಎಂ.ಆರ್.ಪಿ.ಎಲ್. ಡ್ಯಾಮ್ ಪರಿಸ್ಥಿತಿ ಅವಲೋಕಿಸಿದರು.
ಪುರಸಭಾ ಸದಸ್ಯರಾದ ಗೋವಿಂದ ಪ್ರಭು ಬಂಟ್ವಾಳ, ಪುರಸಭಾ ಮುಖ್ಯಾಧಿಕಾರಿ ಮೆಬೆಲ್ ಡಿಸೋಜ, ನಗರ ನೀರು ಸರಬರಾಜು ಇಂಜಿನೀಯರ್ ಶೋಭಾಲಕ್ಷ್ಮಿ, ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೊ ಅವರೊಂದಿಗೆ ಮಾತುಕತೆ ನಡೆಸಿದ ಅವರು, ಡ್ಯಾಂನ ಮೇಲ್ಫಾಗದಲ್ಲಿ ಮರಳು ತುಂಬಿದ್ದು ನೀರಿನ ಕೆಳ ಹರಿವಿಗೆ ತೊಂದರೆಯಾಗುತ್ತಿರುವ ಬಗ್ಗೆ ಪರಿಶೀಲನೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಮರಳು ತೆರವು ಮಾಡಿ ನೀರು ಸರಾಗ ಹರಿಯುವ ಮೂಲಕ ಬಂಟ್ವಾಳ ಹಾಗೂ ಮಂಗಳೂರಿನ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭ ಬಿಜೆಪಿ ಪ್ರಮುಖರಾದ ಬಿ.ದೇವದಾಸ್ ಶೆಟ್ಟಿ, ಗಣೇಶ್ ರೈ ಮಾಣಿ ಮತ್ತು ಎಂ.ಆರ್.ಪಿ.ಎಲ್ ಡ್ಯಾಂನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…