ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ರೈ ನೇತೃತ್ವದಲ್ಲಿ ಕಾಂಗ್ರೆಸ್ ಮನವಿ

ಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದ ಹಿನ್ನಲೆಯಲ್ಲಿ ಮಾಜಿ ಸಚಿವ ಬಿ. ರಮನಾಥ ರೈ ಅವರ ನೇತೃತ್ವದಲ್ಲಿ ಪುರಸಭಾ ಚುನಾಯಿತ ಜನಪ್ರತಿನಿಧಿಗಳ ನಿಯೋಗ ಸೋಮವಾರ ಬಂಟ್ವಾಳ ಪುರಸಭೆಗೆ ಭೇಟಿ ನೀಡಿ ಮನವಿ ಸಲ್ಲಿಸಿತು.

ಜಾಹೀರಾತು

ನೀರಿನ ಸಮಸ್ಯೆಯ ಕುರಿತಾಗಿ ಮುಖ್ಯಾಧಿಕಾರಿಯೊಂದಿಗೆ ಚರ್ಚಿಸಿದ ನಿಯೋಗ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತು. ಈ ಸಂದರ್ಭ ಜಿಲ್ಲಾಧಿಕಾರಿಯವರೊಂದಿಗೆ ದೂರವಾಣಿಯ ಮೂಲಕ ಮಾತನಾಡಿದ ಮಾಜಿ ಸಚಿವ ರೈ ಬಂಟ್ವಾಳ ಪುರಸಭೆಯ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾಗೊಳಿಸಿದರೂ ನದಿಯಲ್ಲಿ ನೀರಿನ ಅಭಾವದಿಂದಾಗಿ ಯೋಜನೆ ಸಫಲತೆ ಕಂಡಿಲ್ಲ, ಇಷ್ಟು ವರ್ಷಗಳ ಕಾಲ ಪುರಸಭೆ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡು ಬಂದಿಲ್ಲ. ಆದ್ದರಿಂದ ಹೆಚ್ಚಿನ ಆದ್ಯತೆ ನೀಡಿ ನೀರಿನ ಸಮಸ್ಯೆ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿಕೊಂಡರು.

ಈ ಸಂದರ್ಭ ಪುರಸಭಾ ಸದಸ್ಯರಾದ ಗಂಗಾಧರ ಪೂಜಾರಿ, ಬಿ. ವಾಸು ಪೂಜಾರಿ, ಜೆಸಿಂತಾ ಡಿಸೋಜಾ, ಮಹಮ್ಮದ್ ನಂದರಬೆಟ್ಟು, ಲೋಲಾಕ್ಷ ಶೆಟ್ಟಿ, ಮಹಮ್ಮದ್ ಶರೀಫ್, ಜನಾರ್ಧನ ಚೆಂಡಿಮಾರ್, ಲುಕ್‌ಮನ್, ಹಸೈನಾರ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಶೆಟ್ಟಿ, ಪುರಸಭೆಯ ಮಾಜಿ ಅಧ್ಯಕ್ಷೆ ವಸಂತಿ ಚಂದಪ್ಪ, ಮಾಜಿ ಸದಸ್ಯ ಜಗದೀಶ್ ಕುಂದರ್, ಲೋಕೇಶ್ ಸುವರ್ಣ, ಪ್ರಮುಖರಾದ ಶ್ರೀಧರ ಅಮೀನ್, ವೆಂಕಪ್ಪ ಪೂಜಾರಿ, ವಿಜಯ್, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್ ಉಪಸ್ಥಿತರಿದ್ದರು.

ಬಳಿಕ ಸುದಿಗಾರರೊಂದಿಗೆ ಮಾತನಾಡಿದ ಅವರು ನೇತ್ರಾವತಿ ನದಿಯಲ್ಲಿ ನೀರಿನ ಒರತೆ ಕಡಿಮೆಯಾಗಿ ಬಂಟ್ವಾಳ ಪುರಸಭಾ ವ್ಯಾಪ್ಯಿಯ ಜನರಿಗೂ ನೀರಿನ ಸಮಸ್ಯೆ ಉಂಟಾಗಿದೆ. ಲಭ್ಯವಾರುವ ನೀರನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಶೀಘ್ರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಭರವಸೆಯನ್ನು ಅಧಿಕಾರಿಗಳು ನೀಡಿರುವುದಾಗಿ ತಿಳಿಸಿದರು. ಮುಖ್ಯಾಧಿಕಾರಿ ಮೇಬಲ್ ಡಿಸೋಜಾ, ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೋ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಇಂಜಿನಿಯರ್ ಶೋಭಾಲಕ್ಷ್ಮಿ ಮೊದಲಾದವರು ಉಪಸ್ಥಿತರಿದ್ದು, ನೀರಿನ ಲಭ್ಯತೆಯ ಕುರಿತು ನಿಯೋಗಕ್ಕೆ ಮಾಹಿತಿ ನೀಡಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ರೈ ನೇತೃತ್ವದಲ್ಲಿ ಕಾಂಗ್ರೆಸ್ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*