ಬಿ.ಸಿ.ರೋಡಿನ ವಿವೇಕಾನಗರದಲ್ಲಿರುವ ಖಾಸಗಿ ಆಸ್ಪತ್ರೆಯ ಮುಂಭಾಗದ ಖಾಲಿ ನಿವೇಶನದಲ್ಲಿ ಪೊಲೀಸ್ ಪೇದೆಯೊಬ್ಬರ ಶವ ಮಂಗಳವಾರ ಸಂಜೆ ಪತ್ತೆಯಾಗಿದೆ. ಮಂಗಳೂರಿನಲ್ಲಿ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಂಟ್ವಾಳದ ಚೆಂಡ್ತಿಮಾರ್ ನಿವಾಸಿ ಜಗದೀಶ(30) ಮೃತದೇಹವೆಂದು ಪೊಲೀಸರು ಗುರುತಿಸಿದ್ದಾರೆ.
ಖಾಸಗಿ ಆಸ್ಪತ್ರೆಯ ಮುಂಭಾಗದ ಖಾಲಿ ನಿವೇಶನವೊಂದರ ಮೂಲೆಯಲ್ಲಿ ಮಣ್ಣಿನ ರಾಶಿಯ ಹಿಂಭಾಗದಲ್ಲಿ ಮೃತದೇಹ ಕಂಡು ಬಂದಿತ್ತು. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದಾಗ ಜಗದೀಶ್ ಅವರ ಮೃತದೇಹ ಎಂದು ಗೊತ್ತಾಗಿದೆ. ಇವರು ಮಂಗಳೂರಿನಲ್ಲಿ ಡಿಎಆರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…