ಬಂಟ್ವಾಳ

ಬರಿಮಾರು ಕಡವಿನಬಳಿಯಲ್ಲಿ ನೇತ್ರಾವತಿಯಲ್ಲಿ ಮುಳುಗಿ ಇಬ್ಬರ ಸಾವು

 

ಜಾಹೀರಾತು

ಬಂಟ್ವಾಳ ತಾಲೂಕಿನ ಕಲ್ಲಡ್ಕ- ಮಾಣಿ ರಾಷ್ಟ್ರೀಯ ಹೆದ್ದಾರಿ ನಡುವಿನ ಸೂರಿಕುಮೇರು ಸಮೀಪದ ಬರಿಮಾರು ಕಡವಿನಬಳಿ ಎಂಬಲ್ಲಿ ಶನಿವಾರ ಸಂಜೆ ನಡೆದ ಘಟನೆಯಲ್ಲಿ ಸ್ನಾನಕ್ಕಿಳಿದ ಕುಂಬಳೆ ಸಮೀಪದ ತಂಡವೊಂದರ ಪೈಕಿ ಇಬ್ಬರು ಮೃತಪಟ್ಟಿದ್ದಾರೆ.

ಬರಿಮಾರು ಗ್ರಾಮದ ಸಂಜೀವ್ ಭೋವಿ ಎಂಬುವರ ಮಗನ ಮದುವೆಗೆ ಆಗಮಿಸಿದ್ದ ಅವರ ದೂರದ ಸಂಬಂಧಿಯಾಗಿರುವ ಕೇರಳದ ಕುಂಬಳೆಯ ಕೊಯಿಪ್ಪಾಡಿಯ ಅಜಿತ್ ಕುಮಾರ್ (40) ಹಾಗೂ ಕುಂಬಳೆ ನಾಯ್ಕಾಪು ನಿವಾಸಿ ಮನೀಷ್ (14) ಮೃತಪಟ್ಟವರು. ಇನ್ನೋರ್ವ ಯಕ್ಷಿತ್ (13) ಎಂಬಾತ ಅಪಾಯದಿಂದ ಪಾರಾಗಿದ್ದು, ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಜೀವ ಬೋವಿ ಅವರ ಮನೆಗೆ ಬಂದಿದ್ದ ಕುಂಬಳೆಯಲ್ಲಿ ಕಲಾವಿದರ ಸಂಘ ನಡೆಸುತ್ತಿದ್ದ ಅಜಿತ್ ತನ್ನೊಂದಿಗೆ ಏಳು ಮಂದಿ ಮಕ್ಕಳನ್ನು ಕರೆದುಕೊಂಡು ಮದುವೆ ಸಂಭ್ರಮಕ್ಕೆ ಬಂದಿದ್ದು, ಶನಿವಾರ ಸಂಜೆ ನೇತ್ರಾವತಿ ಬಳಿಯಲ್ಲಿ ಈಜಲು ತೆರಳಿದ್ದಾರೆ. ಮನೀಷ್ ಮತ್ತು ಯಕ್ಷಿತ ಮುಳುಗುವುದು ಕಂಡು ಅಜೀತ್ ರಕ್ಷಣೆಗೆ ಧುಮುಕಿದ್ದಾರೆ. ಇದನ್ನು ನೋಡಿ ಸ್ಥಳೀಯ ಈಜುಗಾರ ಕೇಶವ ಬರಿಮಾರು ಸಹಿತ ಸ್ಥಳೀಯರು ನೀರಿಗಿಳಿದು ಯಕ್ಷಿತ್ ನನ್ನು ರಕ್ಷಿಸಿದರೂ ಅಜಿತ್ ಮತ್ತು ಮನೀಷ್ ಅವರನ್ನು ಮೇಲಕ್ಕೆತ್ತುವ ವೇಳೆ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದರು.

ಜಾಹೀರಾತು

ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿ ಪಳ್ಳ, ಗ್ರಾಮ ಲೆಕ್ಕಾಧಿಕಾರಿ ಜನಾರ್ಧನ್, ಪ್ರದೀಪ್, ತಾಲೂಕು ಕಚೇರಿ ಸಿಬಂದಿ ಸದಾಶಿವ ಕೈಕಂಬ ಮಹಜರು ನಡೆಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ