ಕಲ್ಲಡ್ಕ

ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ: ಬಿಜೆಪಿ ಬೆಂಬಲಿತ ಪ್ರತಿನಿಧಿಗಳ ಆಯ್ಕೆ

ಬಂಟ್ವಾಳ: ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ನಿ, ಕಲ್ಲಡ್ಕ ಇದರ ಮುಂದಿನ ವರ್ಷಗಳ ಅವಧಿಗೆ ನಡೆದ  ಆಡಳಿತ ಮಂಡಳಿಯ 13 ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ 13 ಪ್ರತಿನಿಧಿಗಳು ಆಯ್ಕೆಯಾಗಿದ್ದಾರೆ.

ಜಾಹೀರಾತು

ಮೇ.೨೬ರಂದು ಶ್ರೀರಾಮ ವಿದ್ಯಾಕೇಂದ್ರದ ಶ್ರೀರಾಮ ಪ್ರೌಢ ಶಾಲೆಯಲ್ಲಿ ನಡೆದ ಚುನಾವಣೆಯಲ್ಲಿ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಕೆ.ಪದ್ಮನಾಭ ಕೊಟ್ಟಾರಿ, ಬಿ.ಸುಧಾಕರ ರೈ, ಗಿರಿಯಪ್ಪ ಗೌಡ, ಪೂವಪ್ಪ ಗೌಡ, ಸುರೇಶ್ ಶೆಟ್ಟಿ, ಮಹಾಬಲ ಸಾಲ್ಯಾನ್ ಆಯ್ಕೆಯಾಗಿರುತ್ತಾರೆ. ಹಿಂದುಳಿದ ಪ್ರವರ್ಗ ಸ್ಥಾನದಿಂದ ಚಂದ್ರಶೇಖರ ಟೈಲರ್ ಮತ್ತು ಲೋಕಾನಂದ, ಮಹಿಳಾ ಮೀಸಲು ಕ್ಷೇತ್ರದಿಂದ ಅರುಣ ಭಟ್ ಮತ್ತು ವಿಜಯ ಆಯ್ಕೆಯಾಗಿರುತ್ತಾರೆ. ಸಾಲಗಾರರಲ್ಲದ ಕ್ಷೇತ್ರದಿಂದ ವೆಂಕಟ್ರಾಯ ಪ್ರಭು ರವರು ಚುನಾಯಿತರಾಗಿರುತ್ತಾರೆ. ಪರಿಶಿಷ್ಟ ಜಾತಿ ಕ್ಷೇತ್ರದಿಂದ ಎಂ.ಆರ್.ನೋಣಯ್ಯ ಮತ್ತು ಪರಿಶಿಷ್ಟ ಪಂಗಡ ಸ್ಥಾನದಿಂದ ಕೊರಗಪ್ಪ ನಾಯ್ಕ ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಸಹಕಾರ ಸಂಘಗಳ ಉಪನಿಬಂಧಕರ ಕಛೇರಿಯ ಪ್ರಥಮ ದರ್ಜೆ ಸಹಾಯಕರಾದ ಬಿ.ನಾಗೇಂದ್ರ ಚುನಾವಣೆ ನಡೆಸಿಕೊಟ್ಟಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ