ಬಂಟ್ವಾಳ

ಪಾಣೆಮಂಗಳೂರು ರೈತರ ಸೇವಾ ಸಹಕಾರ ಸಂಘ: ಬಿಜೆಪಿ ಬೆಂಬಲಿತರ ಆಯ್ಕೆ

ಬಂಟ್ವಾಳ: ಪಾಣೆಮಂಗಳೂರು ರೈತರ ಸೇವಾ ಸಹಕಾರ ಸಂಘ ನಿ , ಪಾಣೆಮಂಗಳೂರು ಮುಂದಿನ 5 ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿಯ 13 ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ 13 ಪ್ರತಿನಿಧಿಗಳು ಆಯ್ಕೆಯಾಗಿದ್ದಾರೆ.

ಜಾಹೀರಾತು

ಸಂಘದ ಮುಖ್ಯ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಜಯಶಂಕರ ಬಾಸ್ರಿತ್ತಾಯ ವೆಂಕಟೇಶ್ವರ ಭಟ್ , ಶ್ರೀನಿವಾಸ ಭಟ್ , ಜ್ಞಾನೇಶ್ವರ ಪ್ರಭು , ವಿಜಯ ರೈ , ಪ್ರದೀಪ್ ಶೆಟ್ಟಿ ಆಯ್ಕೆಯಾಗಿರುತ್ತಾರೆ . ಹಿಂದುಳಿದ ಪ್ರವರ್ಗ ‘ ಎ ‘ ಸ್ಥಾನದಿಂದ ಕೇಶವ ಪಿ ಮತ್ತು ಸುರೇಶ್, ಮಹಿಳಾ ಮೀಸಲು ಕ್ಷೇತ್ರದಿಂದ ಮಮತಾ ಮತ್ತು ಮೋಹಿನಿ ಬಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಿಂದ ಗಣೇಶ್ ಚುನಾಯಿತರಾಗಿರುತ್ತಾರೆ. ಪರಿಶಿಷ್ಟ ಜಾತಿ ಕ್ಷೇತ್ರದಿಂದ ರತ್ನಾ ಮತ್ತು ಪರಿಶಿಷ್ಟ ಪಂಗಡ ಸ್ಥಾನದಿಂದ ನಾಗಪ್ಪ ನಾಯ್ಕ ಆಯ್ಕೆಯಾಗಿರುತ್ತಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.